ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಸಂಭ್ರಮದಲ್ಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಗಾರರು ನಗರಕ್ಕೆ ಬಂದಿದ್ದಾರೆ.
Advertisement
ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಆರ್ಸಿಬಿ ಆಟಗಾರರ ತಂಡವನ್ನು ಡಿಸಿಎಂ ಡಿಕೆ ಶಿವಕುಮಾರ್ ಅವರು ಸ್ವಾಗತಿಸಿದರು.
ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ವಾಗತಿಸಿದ್ದು ಗಮನ ಸೆಳೆಯಿತು.ಕನಕಪುರದಿಂದ ನೇರವಾಗಿ ವಿಮಾನ ನಿಲ್ದಾಣಕ್ಕೆ ಬಂದ ಡಿಸಿಎಂ ಡಿಕೆಶಿ ಆರ್ಸಿಬಿ ತಂಡದ ಆಟಗಾರರನ್ನು ಸ್ವಾಗತಿಸಲು ಸೇರಿದ್ದ ಸಾವಿರಾರು ಅಭಿಮಾನಿಗಳತ್ತ ಕೈಬೀಸಿ ಮುಂದೆ ಹೋದರು.
ಮಾತ್ರವಲ್ಲ ಸಿಎಂ ಸಿದ್ದರಾಮಯ್ಯನವರು ಆರ್ಸಿಬಿ ಆಟಗಾರರಿಗೆ ಅಭಿನಂದನೆ ಸಲ್ಲಿಸುವುದಕ್ಕೆ ಮೊದಲು ಕನಕಪುರದಿಂದ ನೇರವಾಗಿ ಹೆಚ್ಎಎಲ್ಗೆ ಬಂದ ಡಿಕೆ ಆಟಗಾರರನ್ನು ಅಭಿನಂದಿಸಿದ್ದಾರೆ.