ತುಮಕೂರು:- ನಡು ಬೀದಿಯಲ್ಲಿ ದಲಿತ ಮಹಿಳೆಯನ್ನ ಹತ್ಯೆ ಮಾಡಿದ್ದ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ತುಮಕೂರಿನ 3ನೇ ಅಧಿಕ ಜಿಲ್ಲಾ ಮತ್ತು ಸತ್ತ ನ್ಯಾಯಾಲಯ ಪ್ರಕರಣದಲ್ಲಿ ಭಾಗಿಯಾಗಿದ್ದ 21 ಆರೋಪಿಗಳಿಗೆ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ.
14 ವರ್ಷಗಳ ಬಳಿಕ ತೀರ್ಪು ಬಂದಿದ್ದು, ಕುಟುಂಬಸ್ಥರು ಹಾಗೂ ಹೋರಾಟಗಾರರು ನ್ಯಾಯಾಲಯದ ತೀರ್ಪನ್ನ ಸ್ವಾಗತಿಸಿದ್ದಾರೆ. ಅದು 2010ರ ಜೂನ್ 28 ರ ಸಂಜೆ ಸುಮಾರು 7.30 ರ ಸಮಯ. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಗೋಪಾಲಪುರ ಗ್ರಾಮದಲ್ಲಿ ದಲಿತ ಮಹಿಳೆಯನ್ನ ನಡು ರಸ್ತೆಯಲ್ಲೇ ಕಲ್ಲುಗಳಿಂದ ಹೊಡೆದು ಭೀಕರವಾಗಿ ಹತ್ಯೆ ಮಾಡಲಾಗಿತ್ತು.
ಗ್ರಾಮದ ಕೆಲವರ ಕಡು ಕೋಪಕ್ಕೆ ಹೊನ್ನಮ್ಮ ಅಲಿಯಾಸ್ ಡಾಬಾ ಹೊನ್ನಮ್ಮ ಬೀದಿ ಹೆಣವಾಗಿದ್ಲು. ಹತ್ಯೆಯ ಭೀಕರತೆ ಎಷ್ಟಿತ್ತು ಅಂದ್ರೆ ಮೊದಲು ಹೊನ್ನಮ್ಮ ಮೃತಪಟ್ಟಿದ್ದಾಳೆ ಅಂತಾ ಹೊರಟ್ಟಿದ ಕ್ರೂರಿಗಳ ಕಿವಿಗೆ ಹೊನಮ್ಮ ಕುಡಿಯೋಕೆ ನೀರು.. ನೀರು ಅಂತಾ ಕೂಗಿತಿದ್ದಂತೆ ಮತ್ತೆ ಬಂದು ಹೊನ್ನಮ್ಮಳನ್ನ ಚರಂಡಿಗೆ ಹಾಕಿ ಆಕೆಯ ತಲೆ ಮೇಲೆ ಕಲ್ಲಿನ ಚಪ್ಪಡಿ ಹಾಕಿ ಪ್ರಾಣ ತೆಗೆದಿದ್ದರು..
ಹತ್ಯೆ ಪ್ರಕರಣ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗಿತ್ತು.. ಹಂದನಕೆರೆ ಜಿಪಂ ಕ್ಷೇತ್ರದಿಂದ ಒಮ್ಮೆ ಬಿಜೆಪಿ ಅಭ್ಯರ್ಥಿಯಾಗಿಯೂ ಸ್ಪರ್ಧಿಸಿದ್ದ ಹೊನ್ನಮ್ಮದಲಿತ ಪರ ಹೋರಾಟಗಳಲ್ಲಿ ಮುಂಚೂಣಿಯಲ್ಲಿ ಕಾಣಿಸಿಕೊಂಡಿದ್ದರು. ಅಂದಿನ ಬಿಜೆಪಿ ಸರ್ಕಾರ ಉನ್ನತ ಮಟ್ಟದ ಸಮಿತಿ ಕೂಡ ರಚಿಸಿ ವರದಿ ಪಡೆದಿತ್ತು.
ಸಮಾಜ ಕಲ್ಯಾಣ ಇಲಾಖೆಯಿಂದ ಮೃತ ಕುಟುಂಬಕ್ಕೆ 1 ಲಕ್ಷ ರೂ.ಪರಿಹಾರ ಹಾಗೂ ಹೊನ್ನಮ್ಮ ಅವರ ಮಗನಿಗೆ ಸರ್ಕಾರ ಕೆಲಸ ನೀಡಿದೆ. ಕೃತ್ಯ ನಡೆದಾಗ ತಿಂಗಳಾನುಗಟ್ಟಲೇ ಇಡೀ ಊರಿಗೆ ಊರು ಮನೆಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದರು. ದಲಿತ ಸಂಘಟನೆಗಳು ರಾಜ್ಯದೆಲ್ಲೆಡೆ ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದವು.
ಹೊನ್ನಮ್ಮ ಡಾಬಾ ನಡೆಸುತ್ತಿದ್ದು, ಗ್ರಾಮದಲ್ಲಿ ದೇವಸ್ಥಾನ ನಿರ್ಮಿಸಲು ಮರದ ತುಂಡು ಸಂಗ್ರಹಿಸಿ ಇಟ್ಟಿದ್ದರು. ಮರದ ತುಂಡುಗಳನ್ನು ಗ್ರಾಮದ ಕೆಲವರು ಕಳವು ಮಾಡಿದ್ದರು. ಈ ಸಂಬಂಧ ಪೊಲೀಸ್ ಠಾಣೆಗೆ ದೂರು ನೀಡಲಾಗಿತ್ತು. ಇದೇ ವಿಷಯಕ್ಕೆ ಗ್ರಾಮಸ್ಥರು ಹಾಗೂ ಹೊನ್ನಮ್ಮನ ಮಧ್ಯೆ ದ್ವೇಷ ಉಂಟಾಗಿತ್ತು. ಸದಾ ಒಂದಲ್ಲೊಂದು ರೀತಿಯಲ್ಲಿ ಜಗಳ ನಡೆಯುತಿತ್ತು.
ಅವಾಚ್ಯ ಶಬ್ದಗಳಿಂದ ಹಾಗೂ ಜಾತಿ ಹೆಸರಿನಲ್ಲಿ ನಿಂದಿಸುವುದು ಮುಂದುವರಿದಿತ್ತು. ಕೊನೆಗೆ ಹೊನ್ನಮ್ಮ ಅವರನ್ನು ಕಲ್ಲಿನಿಂದ ಜಜ್ಜಿ ಬರ್ಬರವಾಗಿ ಕೊಲೆ ಮಾಡಲಾಗಿತ್ತು. ಅಂದಿನ ಡಿವೈಎಸ್ ಪಿ ಶಿವರುದ್ರಸ್ವಾಮಿ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಚಾರ್ಜ್ ಶಿಟ್ ಸಲ್ಲಿಸಿದ್ರು..
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಬಿ.ಎಸ್.ಜ್ಯೋತಿ ವಾದ ಮಂಡಿಸಿದರು. ಒಟ್ಟು 27 ಆರೋಪಿಗಳಲ್ಲಿ 6 ಮಂದಿ ಈಗಾಗಲೇ ಸಾವನ್ನಪ್ಪಿದ್ದು, ಉಳಿದ 21 ಮಂದಿ ಅಪರಾಧಿಗಳಿಗೆ ಶಿಕ್ಷೆ ಪ್ರಕಟಗೊಂಡಿದೆ. ತಲಾ ಒಬ್ಬ ಆರೋಪಿಗೆ 13,500 ದಂಡ ಸೇರಿ ಒಟ್ಟು 2 ಲಕ್ಷ 83 ಸಾವಿರ 500 ದಂಡ ವಿಧಿಸಿದೆ.
ಇದ್ರಿಂದ ಒಂದೇ ಗ್ರಾಮದ 21 ಜನ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಗೆ ಒಳಗಾಗಿದ್ದಾರೆ. ಐಪಿಸಿ ಹಾಗೂ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ ಅಡಿ ಶಿಕ್ಷೆಯ ಪ್ರಮಾಣವನ್ನು ನ್ಯಾಯಾಧೀಶರಾದ ನಾಗಿರೆಡ್ಡಿ ತೀರ್ಪು ಪ್ರಕಟಿಸಿದ್ದಾರೆ. ನ್ಯಾಯಾಲದ ತೀರ್ಪನ ದಲಿತ ಸಂಘಟನೆಗಳು ಸ್ವಾಗತಿಸಿವೆ.
ರಂಗನಾಥ,ಮಂಜುಳ, ತಿಮ್ಮರಾಜು, ರಾಜು (ದೇವರಾಜು), ಶ್ರೀನಿವಾಸ್, ಆನಂದ (ಆನಂದಸ್ವಾಮಿ), ವೆಂಕಟಸ್ವಾಮಿ, ವೆಂಕಟೇಶ್, ನಾಗರಾಜು, ರಾಜಪ್ಪ, ಮೀಸೆ ಹನುಮಂತಯ್ಯ, ಗಂಗಾಧರ (ಗಂಗಣ್ಣ), ನಂಜುಂಡಯ್ಯ, ಸತ್ಯಪ್ಪ- ಸತೀಶ, ಚಂದ್ರಶೇಖರ (ಚಂದ್ರಯ್ಯ), ರಂಗಯ್ಯ (ರಾಮಯ್ಯ), ಉಮೇಶ್, ಚನ್ನಮ್ಮ ಮಂಜಣ್ಣ, ಮಂಜು, ಸ್ವಾಮಿ (ಮೋಹನ್ ಕುಮಾರ್) ಶಿಕ್ಷೆಗೆ ಒಳಗಾದವರು.
ಇನ್ನೂ ಪ್ರಕರಣದ ಹನುಮಂತಯ್ಯ , ವೆಂಕಟೇಶ್, ರಾಮಯ್ಯ, ರಾಮಯ್ಯ, ದಾಸಪ್ಪ, ಬುಳ್ಳೆ ಹನುಮಂತಯ್ಯ ಈಗಾಗಲೇ ಮೃತಪಟ್ಟಿದ್ದಾರೆ. ಬರೋಬರಿ ಒಂದೂವರೆ ದಶಕಗಳ ಬಳಿಕ ದಲಿತ ಮಹಿಳೆಯ ಹತ್ಯೆಗೆ ನ್ಯಾಯ ಸಿಕ್ಕಂತಾಗಿದೆ.