ಪರಪ್ಪನ ಅಗ್ರಹಾರದಿಂದ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಬೆಳ್ಳಂಬೆಳಗ್ಗೆ ಅಧಿಕಾರಿಗಳು ಸುರಕ್ಷಿತವಾಗಿ ಅವರನ್ನು ಬಳ್ಳಾರಿಗೆ ಕರೆದುಕೊಂಡು ಹೋಗಿದ್ದಾರೆ. 9.45ರ ವೇಳೆಗೆ ಬಳ್ಳಾರಿಗೆ ತಲುಪಿಸಿದ ದರ್ಶನ್ ಇದೀಗ ಕೇಂದ್ರ ಕಾರಾಗೃಹದ ಒಳ ಸೇರಿದ್ದಾರೆ. ಸದ್ಯ ನಟನಿಗೆ ಹೊಸ ಕೈದಿ ನಂಬರ್ ಕೂಡ ಜೈಲಾಧಿಕಾರಿಗಳು ನೀಡಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ A2 ಆರೋಪಿ ದರ್ಶನ್ ವಿಚಾರಣಾಧೀನ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದರು. ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿ ದರ್ಶನ್ಗೆ ಜೈಲಾಧಿಕಾರಿಗಳಿಂದ ಕೈದಿ ನಂಬರ್ 6106 ನೀಡಿದ್ದರು. ಆದರೀಗ ಬಳ್ಳಾರಿಗೆ ಶಿಫ್ಟ್ ಆದ ಬಳಿಕ ಬೇರೆ ನಂಬರ್ ನೀಡಿದ್ದಾರೆ.
ಇನ್ನೂ ಬೆಂಗಳೂರಿನಿಂದ ಹೊರಟು ಬಳ್ಳಾರಿ ಜೈಲು ತಲುಪಿದ ದರ್ಶನ್ ಅವರು ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಅವರಿಗೆ ಕೂಲಿಂಗ್ ಗ್ಲಾಸ್ ಧರಿಸಲು ಏಕೆ ಅನುಮತಿ ನೀಡಲಾಯಿತು ಎಂಬ ಪ್ರಶ್ನೆ ಉದ್ಭವ ಆಗಿದೆ. ಜೈಲಿನ ನಿಯಮಾನುಸಾರ ಮುಖ್ಯ ದ್ವಾರದಲ್ಲಿ ಸ್ವಂತ ವಸ್ತುಗಳನ್ನು ಒಪ್ಪಿಸಬೇಕು.
ಆದರೆ ದರ್ಶನ್ಗೆ ಕೂಲಿಂಗ್ ಗ್ಲಾಸ್ ಧರಿಸಲು ಅನುಮತಿ ನೀಡಿದ್ದರಿಂದ ಕರ್ತವ್ಯಲೋಪ ಆಗಿದೆ. ಈ ಹಿನ್ನೆಲೆಯಲ್ಲಿ, ದರ್ಶನ್ ಅವರನ್ನು ಕರೆತಂದ ಭದ್ರತಾ ಸಿಬ್ಬಂದಿಯ ವಿರುದ್ಧ ಕ್ರಮಕೈಗೊಳ್ಳುವಂತೆ ಕಾರಾಗೃಹ ಡಿಐಜಿ ಟಿ.ಪಿ. ಶೇಷ ಪತ್ರ ಬರೆದಿದ್ದಾರೆ. ಶಿಸ್ತು ಕ್ರಮ ಜರುಗಿಸಲು ಮಾನ್ಯ ಪ್ರಾಧಿಕಾರಕ್ಕೆ ವರದಿ ಸಲ್ಲಿಸುವಂತೆ ಮನವಿ ಮಾಡಲಾಗಿದೆ.