ಬೆಂಗಳೂರು:- ಬಳ್ಳಾರಿ ಜೈಲಿಗೆ ಸ್ಟೈಲಿಶ್ ಲುಕ್ನಲ್ಲಿ ಆರೋಪಿ ದರ್ಶನ್ ಎಂಟ್ರಿ ನೀಡಿದ ವಿಚಾರವಾಗಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ ತಿಳಿಸಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಬಳ್ಳಾರಿ ಜೈಲಿನ ಕಾರಾಗೃಹದ ಒಳಗೆ ಎಂಟ್ರಿ ನೀಡುವಾಗ ಸ್ಟೈಲಿಶ್ ಲುಕ್ನಲ್ಲಿ ಕಾಣಿಸಿಕೊಂಡರು. ಆದರೆ ಯಾವುದೇ ಕಾರಣಕ್ಕೂ ಜೈಲಿನಲ್ಲಿ ಕೂಲಿಂಗ್ ಗ್ಲಾಸ್ನಂಥ ವಸ್ತುಗಳನ್ನು ಒಯ್ಯುವ ಹಾಗಿಲ್ಲ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸಿದ ಬೆಂಗಾವಲು ಪಡೆಗೆ ನೋಟಿಸ್ ನೀಡಲಾಗುವುದು ಎಂದು ಬಂಧಿಕಾನೆ ಡಿಐಜಿ ಟಿ.ಪಿ ಶೇಷಾ, ಮಾಹಿತಿ ನೀಡಿದ್ದಾರೆ.
ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟ ದರ್ಶನ್ನನ್ನು ಪೊಲೀಸ್ ಬಂದೋಬಸ್ತ್ನಲ್ಲಿ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗಿದೆ. ಇನ್ಮುಂದೆ ನಟ ದರ್ಶನ್ ಭೇಟಿಗೆ ಬಳ್ಳಾರಿ ಜೈಲಿಗೆ ಸೆಲೆಬ್ರೆಟಿಗಳಿಗೆ ಅವಕಾಶ ಇಲ್ಲ ಎನ್ನಲಾಗಿದೆ.
ಈಗಾಗಲೇ ನಟ ದರ್ಶನ್ ಬಳ್ಳಾರಿ ಜೈಲಿಗೆ ಸ್ಥಳಾಂತರವಾಗಿದ್ದು, ಸಾಮಾನ್ಯ ಖೈದಿಯಂತೆ ಇರಬೇಕಾಗಿದೆ. ಪರಪ್ಪನ ಅಗ್ರಹಾರದಲ್ಲಿದ್ದ ವಿವಿಐಪಿ ಟ್ರೀಟ್ಮೆಂಟ್ ಬಳ್ಳಾರಿ ಜೈಲಿನಲ್ಲಿ ಇರುವುದಿಲ್ಲ. ಇನ್ನೂ ದಿನದ 24/7 ದರ್ಶನ್ ಮೇಲೆ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲು ಇರಲಿದೆ. ದಿನನಿತ್ಯ ದರ್ಶನ್ ಸಿಸಿಟಿವಿ ಫೂಟೇಜ್ ಪ್ರತ್ಯೇಕವಾಗಿ ಶೇಖರಿಸಿಡಲು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.