ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದು ಹೊರ ಬಂದಿರುವ ನಟ ದರ್ಶನ್ ಇತ್ತೀಚೆಗೆ ವಿಚಾರಣೆಗೆ ಕೋರ್ಟ್ ಗೆ ಹಾಜರಾಗಿದ್ದರು. ಸದ್ಯ ನಟ ದರ್ಶನ್ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದು ವಿದೇಶಕ್ಕೆ ತೆರಳಲು ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಡೆವಿಲ್ ಸಿನಿಮಾದ ಶೂಟಿಂಗ್ ಸಮಯದಲ್ಲಿ ನಟ ದರ್ಶನ್ ಅವರನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿತ್ತು. ಆ ಬಳಿಕ ಸುಮಾರು ಏಳು ತಿಂಗಳು ದರ್ಶನ್ ಜೈಲಿನಲ್ಲಿದ್ದರು. ಸದ್ಯ ಜಾಮೀನು ಪಡೆದು ಹೊರ ಬರುತ್ತಿದ್ದಂತೆ ಡೆವಿಲ್ ಸಿನಿಮಾದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದರು. ಇದೀಗ ದರ್ಶನ್ ವಿದೇಶದಲ್ಲಿ ಶೂಟಿಂಗ್ ಮಾಡಲು ಅನುಮತಿ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ದುಬೈ ಹಾಗೂ ಯೂರೋಪ್ ನಲ್ಲಿ ಡೆವಿಲ್ ಸಿನಿಮಾದ ಶೂಟಿಂಗ್ ಇರಲಿದೆ. ಹೀಗಾಗಿ ಜೂನ್ 1 ರಿಂದ 25 ರವರೆಗೆ 25 ದಿನಗಳ ಕಾಲ ವಿದೇಶಕ್ಕೆ ತೆರಳಲು ಅನುಮತಿ ಕೋರಿ ಸಿಆರ್ಪಿಸಿ ಸೆಕ್ಷನ್ 439(1) (b) ಅಡಿ 57 ನೇ ಸಿಸಿಹೆಚ್ ನ್ಯಾಯಾಲಯಕ್ಕೆ ಅರ್ಜಿ ಹಾಕಿದ್ದಾರೆ.
ವಿದೇಶಕ್ಕೆ ತೆರಳಿದರೆ ಭಾರತಕ್ಕೆ ಮತ್ತೆ ವಾಪಸ್ ಬರುವುದು ಅನುಮಾನ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ವಿಚಾರಣೆ ನಡೆಯುತ್ತಿರುವುದ್ದರಿಂದ ವಿದೇಶಕ್ಕೆ ತೆರಳಲು ಅನಮತಿ ನೀಡದಂತೆ ವಿಶೇಷ ಸಾರ್ವಜನಿಕ ಅಭಿಯೋಜಕ (ಎಸ್ಪಿಪಿ) ಆಕ್ಷೇಪಣೆ ಸಲ್ಲಿಸಿದ್ದಾರೆ.