ದರ್ಶನ್‌ʼಗೆ ಮೂಗಿನ ತುದಿಯಲ್ಲಿ ಕೋಪ ಇದೆ: ನಟ ವಿನೋದ್ ರಾಜ್

0
Spread the love

ಬೆಂಗಳೂರು: ದರ್ಶನ್‌ʼಗೆ ಮೂಗಿನ ತುದಿಯಲ್ಲಿ ಕೋಪ ಇದೆ. ಈಗ ದರ್ಶನ್‌ಗೆ ಅಗ್ನಿ ಪರೀಕ್ಷೆ ಅಷ್ಟೇ ಎಂದು ವಿನೋದ್ ರಾಜ್ ಹೇಳಿದರು. ದರ್ಶನ್ ಪ್ರಕರಣದ ಬಗ್ಗೆ ಮಾತನಾಡಿದ ಅವರು, ದಿನಕ್ಕೆ ಒಂದೇ ಭೇಟಿ ಅಂತ ಜೈಲು ಅಧಿಕಾರಿಗಳು ಹೇಳಿದರು. ಮಧ್ಯಾಹ್ನ ನಂತರ ಮತ್ತೆ ದರ್ಶನ್ ಮನೆಯವರ ಜೊತೆ ಬರುತ್ತೇನೆ. ಕೆಲವು ನಡೆಯಬಾರದ ಘಟನೆಗಳು ನಡೆದು ಹೋಗುತ್ತವೆ.

Advertisement

ವಿಧಿಗಿಂತಲೂ ಮೀರಿದ ಘಟನೆಗಳು ಆಗುತ್ತದೆ. ದರ್ಶನ್‌ಗೆ ಮೂಗಿನ ತುದಿಯಲ್ಲಿ ಕೋಪ ಇದೆ. ಈಗ ದರ್ಶನ್‌ಗೆ ಅಗ್ನಿ ಪರೀಕ್ಷೆ ಅಷ್ಟೇ. ನಮ್ಮ ತಾಯಿಗೆ ದರ್ಶನ್ ಮೇಲೆ ತುಂಬಾ ಪ್ರೀತಿ ಇದೆ. ಆಗ ಮಂಚದಲ್ಲಿ ಮಲಗಿದ್ದಾಗಲೂ ದರ್ಶನ್ ಬಗ್ಗೆಯೇ ಅಮ್ಮ ಮಾತನಾಡುತ್ತಿದ್ದರು. ತೂಗುದೀಪ್ ಮಗ ಬಿಟ್ಟು ಕೊಡಬೇಡ ಅಂತಿದ್ದರು. ಯಾಕೆ ಈ ರೀತಿ ಘಟನೆ ಆಯಿತು ಅನ್ನಿಸುತ್ತಿದೆ. ಅಚಾತುರ್ಯ ಅಂತಾ ಅಷ್ಟೇ ಹೇಳ್ತೀನಿ ಎಂದು ವಿನೋದ್ ರಾಜ್ ಮಾತನಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here