ಬೆಂಗಳೂರು:- ದರ್ಶನ್ ಗೆ ಜೈಲಲ್ಲಿ ಸಿಗುತ್ತಿರುವ ಐಷಾರಾಮಿ ಜೀವನ ನೋಡಿ ನೋವಾಗಿದೆ ಎಂದು ರೇಣುಕಾಸ್ವಾಮಿ ತಂದೆ ಕಣ್ಣೀರು ಹಾಕಿದ್ದಾರೆ.
Advertisement
ಜೈಲಿನಲ್ಲಿ ಸಹ ಕೈದಿಯ ಮೊಬೈಲ್ನಲ್ಲಿ ನಟ ದರ್ಶನ್ ವಿಡಿಯೋ ಕಾಲ್ ವೈರಲ್ ಆಗಿರುವ ವಿಚಾರವಾಗಿ ಮಾತನಾಡಿ, ಹೀಗಾದರೆ ಪ್ರಕರಣ ಸಿಬಿಐಗೆ ವಹಿಸಿಬೇಕೆಂದು ಅನಿಸುತ್ತಿದೆ. ದರ್ಶನ್ ಜೈಲಿನಲ್ಲಿದ್ದಾರೋ ಇಲ್ವೊ ಎಂಬ ಭಾವನೆ ಬರ್ತಿದೆ.
ದರ್ಶನ್ ಸಹ ಸಾಮಾನ್ಯ ಕೈದಿಯಂತೆಯೇ ಇರಬೇಕು. ಆದರೆ ರೆಸಾರ್ಟ್ನಲ್ಲಿರುವಂತೆ ಕಂಡು ಶಾಕ್ ಆಯ್ತು. ದರ್ಶನ್ಗೆ ಸಿಗರೇಟ್ ನೀಡಿದವರಿಗೆ ಶಿಕ್ಷೆ ಆಗಬೇಕು. ಮುಖ್ಯಮಂತ್ರಿ, ಗೃಹಸಚಿವರು ಈ ಬಗ್ಗೆ ಗಮನಹರಿಸಬೇಕು ಎಂದು ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಶಿವನಗೌಡ್ರು ಆಗ್ರಹಿಸಿದ್ದಾರೆ.