ಬಳ್ಳಾರಿ ಜೈಲಿಗೆ ಅಡ್ಜಸ್ಟ್ ಆಗದ ದರ್ಶನ್; ರಾತ್ರಿಯೆಲ್ಲ ನಿದ್ದೆ ಇಲ್ಲದೆ ಒದ್ದಾಡಿದ ದಾಸ!

0
Spread the love

ಬೆಂಗಳೂರು:- ಪರಪ್ಪನ ಅಗ್ರಹಾರದಿಂದ ಬಳ್ಳಾರಿ ಜೈಲಿಗೆ ಕೊಲೆ ಆರೋಪಿ ದರ್ಶನ್ ನಿನ್ನೆ ಶಿಫ್ಟ್ ಆಗಿದ್ದು, ರಾತ್ರಿಯೆಲ್ಲಾ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ.

Advertisement

ಬಳ್ಳಾರಿ ಜೈಲಿನಲ್ಲಿ ವಿಶೇಷ ಆತಿಥ್ಯಕ್ಕೆ ಬ್ರೇಕ್ ಹಾಕಲಾಗಿದೆ. ಇದು ದರ್ಶನ್​ಗೆ ನುಂಗಲಾರದ ತುತ್ತಾಗಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದ ನಂತರ ಬಂಧನಕ್ಕೆ ಒಳಗಾಗಿ ಹಾಯಾಗಿದ್ದ ಅವರು ಈಗ ನಿಜವಾದ ಸಂಕಷ್ಟ ಅನುಭವಿಸುತ್ತಿದ್ದಾರೆ. ಸದ್ಯ ಕುಟುಂಬದವರಿಗೆ ಮಾತ್ರ ಭೇಟಿಗೆ ಅವಕಾಶ ಇದೆ. ಅವರು ರಾತ್ರಿ ಇಡೀ ನಿದ್ದೆ ಇಲ್ಲದೆ ಒದ್ದಾಡಿದ್ದಾರೆ.

ಬಳ್ಳಾರಿ ಜೈಲಿನಲ್ಲಿ ದರ್ಶನ್​ ಮೊದಲ ದಿನ ಕಳೆದಿದ್ದಾರೆ. ರಾತ್ರಿ 1 ಗಂಟೆವರೆಗೆ ನಿದ್ದೆ ಮಾಡದೆ ಒದ್ದಾಡಿದ್ದಾರೆ. ಜೈಲಿಗೆ ಇನ್ನೂ ಅವರು ಹೊಂದಿಕೊಂಡಿಲ್ಲ. ಜೈಲಿನಲ್ಲಿ ಬೆಳಗಿನ ಉಪಾಹಾರಕ್ಕೆ ಉಪ್ಪಿಟ್ಟು ತಿಂದಿದ್ದಾರೆ. ಅವರಿಗೆ ಜೈಲಿನ ನಿಯಮದಂತೆ 355 ಗ್ರಾಮ್ ಉಪ್ಪಿಟ್ಟು ನೀಡಲಾಗಿದೆ.

ಬಳ್ಳಾರಿ ಜೈಲಿಗೆ ದರ್ಶನ್ ಅವರನ್ನು ಆಗಸ್ಟ್ 29ರಂದು ಶಿಫ್ಟ್ ಮಾಡಿದ್ದರು. ಅವರು ಬೆಳ್ಳಿಗೆ ತಿಂಡಿ, ಮಧ್ಯಾಹ್ನದ ಊಟವನ್ನು ಬಿಟ್ಟಿದ್ದರು.


Spread the love

LEAVE A REPLY

Please enter your comment!
Please enter your name here