ಜೈಲಿಂದ ದರ್ಶನ್ ರಿಲೀಸ್: ಮಗನನ್ನು ನೋಡಲು ಮನೆಗೆ ಬಂದ ಮೀನಾ ತೂಗುದೀಪ್!

0
Spread the love

ಬೆಂಗಳೂರು: ಕೊಲೆ ಕೇಸ್​ನಲ್ಲಿ 131 ದಿನಗಳ ಜೈಲಿನಲ್ಲಿದ್ದ ದರ್ಶನ್​, ಬಿಡುಗಡೆಯಾಗಿದ್ದಾರೆ. ದರ್ಶನ್ ಜೈಲಿಂದ ಹೊರ ಬರುತ್ತಿದ್ದಂತೆ ಅಭಿಮಾನಿಗಳು ಸಂಭ್ರಮ ಮುಗಿಲು ಮುಟ್ಟಿದೆ. ತಮ್ಮ ನೆಚ್ಚಿನ ನಟ ದರ್ಶನ್​ನನ್ನು​ ನೋಡಲು ಅಭಿಮಾನಿಗಳು ಹರಸಾಹಸ ಪಟ್ಟಿದ್ದಾರೆ. ಇದರ ಬೆನ್ನಲ್ಲೇ  ಮಗನನ್ನು ನೋಡಲು ಮೀನಾ ತೂಗುದೀಪ ಆಗಮಿಸಿದ್ದಾರೆ.

Advertisement

ವಿಜಯಲಕ್ಷ್ಮಿ ನೆಲೆಸಿರುವ ಹೊಸಕೆರೆಹಳ್ಳಿಯ ಅಪಾರ್ಟ್‌ಮೆಂಟ್‌ಗೆ ಮೊಮ್ಮಗ ಚಂದನ್ ಜೊತೆ ಮಗನನ್ನು ನೋಡಲು ಆಗಮಿಸಿದ್ದಾರೆ. ದೀಪಾವಳಿ ಹಬ್ಬ, ಮೊಮ್ಮಗ ವಿನೀಶ್ ಹುಟ್ಟುಹಬ್ಬವನ್ನು ಆಚರಿಸುವುದರ ಜೊತೆಗೆ ಮಗ ದರ್ಶನ್‌ನನ್ನು ನೋಡಿ ಮೀನಾ ಖುಷಿಪಟ್ಟಿದ್ದಾರೆ. ಇದೇ ವೇಳೆ, ಅಪಾರ್ಟ್‌ಮೆಂಟ್‌ ಬಳಿ ನಟನನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಫ್ಯಾನ್ಸ್ ಜಮಾಯಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here