ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ನ್ಯಾಯಾಧೀಶರಿಗೆ ದರ್ಶನ್ ಪತ್ರ.!

0
Spread the love

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೂನ್ 11 ರಂದು ಬಂಧನಕ್ಕೆ ಒಳಗಾಗಿದ್ದಾರೆ. ಮೊದಲ 13 ದಿನ ಪೊಲೀಸ್ ಕಸ್ಟಡಿಯಲ್ಲಿದ್ದ ನಟ ದರ್ಶನ್ ಆ ನಂತರ ಪರಪ್ಪನ ಅಗ್ರಹಾರ ಜೈಲಿನಲ್ಲಿ ದಿನ ದೂಡುತ್ತಿದ್ದಾರೆ.

Advertisement

ಜೈಲಿನ ವ್ಯವಸ್ಥೆಗೆ ಹೊಂದಿಕೊಳ್ಳಲು ಕಷ್ಟಪಟ್ಟಿರುವ ದರ್ಶನ್​ ಆರಂಭದಲ್ಲಿ ಜೈಲೂಟ ಸರಿಹೋಗದೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆ ಅನುಭವಿಸಿದ್ದರು. ಇದೀಗ ಮನೆ ಊಟ, ಬಟ್ಟೆ, ಹಾಸಿಗೆಗಾಗಿ ಮತ್ತೆ ಹೈಕೋರ್ಟ್‌ಗೆ ದರ್ಶನ್ ಇಂದು ಅರ್ಜಿ ಸಲ್ಲಿಸಿದ್ದಾರೆ.

ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸುವುದರ ಜೊತೆಗೆ ದರ್ಶನ್ ಅವರು ಕಳೆದ ಜೂನ್ 06ರಂದು ಮನೆ ಊಟಕ್ಕಾಗಿ ನ್ಯಾಯಾಧೀಶರಿಗೆ ಪತ್ರವನ್ನು ಬರೆದಿದ್ದಾರೆ. ನನಗೆ ಮೂಳೆ ಶಸ್ತ್ರಚಿಕಿತ್ಸೆಯಾಗಿದೆ, ಪ್ರೋಟಿನ್‌ ಅವಶ್ಯಕತೆ ಇದೆ. ಕಾರಾಗೃಹಕ್ಕೆ ದಾಖಲಾದ ದಿನದಿಂದ ಜೈಲೂಟ ಸೇವೆನೆ ಮಾಡುತ್ತಿದ್ದೇನೆ. ನನ್ನ ಆರೋಗ್ಯ, ದೇಹದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಮನೆ ಊಟ ನೀಡುವಂತೆ ಪತ್ರದ ಮೂಲಕ ದರ್ಶನ್ ಮನವಿ ಮಾಡಿದ್ದಾರೆ.


Spread the love

LEAVE A REPLY

Please enter your comment!
Please enter your name here