ಬೆಂಗಳೂರು: ನಟ ದರ್ಶನ್ ಅವರಿಗೆ ಜೈಲಿನಲ್ಲಿ ಹಾಸಿಗೆ, ದಿಂಬು, ಬೆಡ್ಶೀಟ್ ನೀಡುವಂತೆ ಬೆಂಗಳೂರಿನ ಕೆಳ ಹಂತದ ಕೋರ್ಟ್ ಆದೇಶ ಕೊಟ್ಟಿತ್ತು. ಆದರೆ, ಇದಕ್ಕೆ ಅವಕಾಶ ಸಿಗುತ್ತಿಲ್ಲ ಎಂದು ದರ್ಶನ್ ಅವರು ಮತ್ತೆ ಕೋರ್ಟ್ ಮೊರೆ ಹೋಗಿದ್ದಾರೆ. ಹಿಂದಿನ ಸ್ಥಿತಿಯೇ ಮುಂದುವರಿದಿದೆ ಎಂದು ಅವರು ಅಳಲು ತೋಡಿಕೊಂಡಿದ್ದಾರೆ. ಸದ್ಯ ಇದಕ್ಕೆ ಸಂಬಂಧಿಸಿದಂತೆ
ಇಂದು ಅರ್ಜಿ ವಿಚಾರಣೆ ನಡೆಯಲಿದೆ. ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ದರ್ಶನ್ ಕೆಲ ಮೂಲಸೌಕರ್ಯಕ್ಕೆ ಬೇಡಿಕೆ ಇಟ್ಟಿದ್ದಾರೆ. ಕಳೆದ ವಾರ ಮೂಲ ಸೌಕರ್ಯ ನೀಡಿ, ಜೈಲಿನ ಮ್ಯಾನ್ಯುಯಲ್ ಪ್ರಕಾರ ಅಂತ ಕೋರ್ಟ್ ಆದೇಶ ಮಾಡಿತ್ತು. ಅದೇ ರೀತಿ ಜೈಲಿನ ಅಧಿಕಾರಿಗಳು ಜಮ್ಖಾನ, ದಿಂಬು ಕಲ್ಪಿಸಿದೆ.
ಜೊತೆಗೆ ವಾಕಿಂಗ್ಗೆ ಅವಕಾಶ ನೀಡಿದೆ. ಇದರಿಂದ ಕುಪಿತರಾದ ದರ್ಶನ್ ಮತ್ತೆ ಕೋರ್ಟ್ಗೆ ಜೈಲಾಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಹೇಳಿದ್ರೂ ಹಾಸಿಗೆ ಕೊಟ್ಟಿಲ್ಲ ಅಂತ ಮತ್ತೆ ಕೋರ್ಟ್ಗೆ ಹೋಗಿದ್ದಾರೆ. ಕನಿಷ್ಠ ಸೌಲಭ್ಯವನ್ನೂ ನೀಡಿಲ್ಲ. ಜೈಲು ಸೇರಿ ತಿಂಗಳಾದ್ರೂ ಕ್ವಾರಂಟೈನ್ ಸೆಲ್ನಲ್ಲಿ ಇಟ್ಟಿದ್ದಾರೆಂದು ದೂರಿದ್ದಾರೆ.
ಅರ್ಜಿ ಸಲ್ಲಿಸಿದ ಬಳಿಕ ಸುನೀಲ್ ವಾದ ಮಂಡಿಸಿ, ದರ್ಶನ್ ಜೈಲು ಸೇರಿ ಒಂದು ತಿಂಗಳು ಕಳೆದು ಹೋಗಿದೆ. ಇನ್ನೂ ಅವರನ್ನು ಕ್ವಾರಂಟೈನ್ ಸೆಲ್ನಲ್ಲಿ ಇರಿಸಿದ್ದಾರೆ. 14 ದಿನಗಳ ಕಾಲ ಮಾತ್ರ ಕ್ವಾರಂಟೈನ್ ಸೆಲ್ನಲ್ಲಿ ಇರಿಸಬೇಕು. ಇನ್ನು ಬಿಸಿಲಿನ ವಿಚಾರಕ್ಕೆ ಸೂರ್ಯನನ್ನು ತರೋದಕ್ಕೆ ಆಗುತ್ತಾ ಅಂತ ಹಾರಿಕೆ ಉತ್ತರ ಕೊಡ್ತಾರೆ. ಹಾಸಿಗೆ, ದಿಂಬು ಏನನ್ನೂ ಕೊಡ್ತಾ ಇಲ್ಲ. ತುಂಬಾ ಕನಿಷ್ಠವಾಗಿ ನಡೆಸಿಕೊಳ್ತಾ ಇದ್ದಾರೆ ಎಂದು ಕೋರ್ಟ್ಗೆ ಮನವಿ ಮಾಡಿದ್ದಾರೆ. ಅರ್ಜಿ ಸ್ವೀಕರಿಸಿರುವ ನ್ಯಾಯಾಲಯ ಇಂದು ವಿಚಾರಣೆ ನಡೆಸಲಿದೆ.



