ಜಾಮೀನು ಸಿಕ್ಕರು ದರ್ಶನ್‌ ಗೆ ಮುಗಿಯದ ಸಂಕಷ್ಟ: ಇಂದು ಸುಪ್ರೀಂ ಕೋರ್ಟ್​ನಲ್ಲಿ ಮಹತ್ವದ ವಿಚಾರಣೆ..!

0
Spread the love

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​​ ಜಾಮೀನು ಪಡೆದು ಹೊರ ಬಂದಿದ್ದಾರೆ. ಆದ್ರೆ ಇದೀಗ ಮತ್ತೆ ದರ್ಶನ್‌ ಎಂಡ್‌ ಟೀಂಗೆ ಕಾನೂನು ಸಂಕಷ್ಟ ಎದುರಾಗಿದೆ. ಇಂದು ಸುಪ್ರೀಂ ಕೋರ್ಟ್​ನಲ್ಲಿ ದರ್ಶನ್​ ಬೇಲ್ ಅರ್ಜಿ ವಿಚಾರಣೆ ನಡೆಯಲಿದೆ.

Advertisement

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ತೂಗುದೀಪ ಸೇರಿ ಒಟ್ಟು 7 ಆರೋಪಿಗಳಿಗೆ ಹೈಕೋರ್ಟ್‌ 2024 ಡಿಸೆಂಬರ್ 13ರಂದು ಷರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಹೈಕೋರ್ಟ್ ನೀಡಿರುವ ಜಾಮೀನು ರದ್ದು ಕೋರಿ ಸರ್ಕಾರ ಸುಪ್ರೀಂಕೋರ್ಟ್​​ ಮೊರೆ ಹೋಗಿದೆ. ಅಂತೆಯೇ ಇಂದು ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಪರ್ದೀವಾಲ, ನ್ಯಾಯಮೂರ್ತಿ ಮಹದೇವನ್ ಪೀಠ ಅರ್ಜಿ ವಿಚಾರಣೆಯನ್ನು ಕೈಕೈಗೆತ್ತಿಕೊಳ್ಳಲಿದ್ದಾರೆ.

ದರ್ಶನ್ ಜಾಮೀನು ರದ್ದು ಮಾಡಲು ರಾಜ್ಯ ಸರ್ಕಾರದ ಪ್ರಾಸಿಕ್ಯೂಷನ್ ಮನವಿ ಮಾಡಿದ್ದು, ಎ1 ಪವಿತ್ರಾಗೌಡ, ಎ2 ದರ್ಶನ್, ಎ6 ಜಗದೀಶ್‌, ಎ7 ಅನುಕುಮಾರ್‌, ಎ11 ನಾಗರಾಜ್, ಎ12 ಎಂ.ಲಕ್ಷ್ಮಣ್‌ ಎ 14 ಪ್ರದೂಶ್​ಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ.

ಹೈಕೋರ್ಟ್‌ ದರ್ಶನ್‌ ಗೆ ನೀಡಿರುವ ಜಾಮೀನು​ ಅವಸರದಿಂದ ಕೂಡಿದಂತಿದೆ. ಜಾಮೀನು ಪಡೆದು ಹೊರ ಬಂದಿರುವ ದರ್ಶನ್ ಸಾಕ್ಷ್ಯಗಳನ್ನು ತಿರುಚುವ ಸಾಧ್ಯತೆಗಳನ್ನು ಅಲ್ಲಗಳೆಯುವಂತಿಲ್ಲ. ಸೆಷನ್ಸ್ ಕೋರ್ಟ್​ನಲ್ಲಿ ಕೇಸ್ ಚಾರ್ಜ್ ಫ್ರೇಮ್ ಇನ್ನೂ ಹಂತಕ್ಕೆ ಬಂದಿಲ್ಲ. ನಟ ದರ್ಶನ್​ಗೆ 6 ವಾರಗಳು ಮಧ್ಯಂತರ ಬೇಲ್ ನೀಡಿದ್ದಾಗಲೂ ಶಸ್ತ್ರಚಿಕಿತ್ಸೆ ಮಾಡಿಸಿಲ್ಲ. ನಟ ದರ್ಶನ್​ ಮತ್ತು ಗ್ಯಾಂಗ್ ಹೈಕೋರ್ಟ್​ ಜಾಮೀನಿಗೆ ಅರ್ಹರಾಗಿಲ್ಲ. ಕೇಸ್​​ನಲ್ಲಿ ಪ್ರಬಲ ಸಾಕ್ಷಿಗಳಿದ್ದರೂ ಪರಿಗಣಿಸಲು ಕೋರ್ಟ್​​​​ ವಿಫಲವಾಗಿದೆ. ಹೀಗಾಗಿ ಹೈಕೋರ್ಟ್ ಜಾಮೀನು ಆದೇಶಕ್ಕೆ ತಡೆ ನೀಡುವಂತೆ ವಕೀಲರು ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಿದ್ದಾರೆ.


Spread the love

LEAVE A REPLY

Please enter your comment!
Please enter your name here