ದಾವಣಗೆರೆ: ಮಂಗನ ದಾಳಿಗೆ ವ್ಯಕ್ತಿ ಬಲಿ

0
Spread the love

ದಾವಣಗೆರೆ: ಮಂಗನ ದಾಳಿಗೆ ವ್ಯಕ್ತಿ ಬಲಿಯಾಗಿರುವ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಎಕೆ ಕಾಲೋನಿಯಲ್ಲಿ ನಡೆದಿದೆ.

Advertisement

ಗುತ್ಯಪ್ಪ ಮಂಗನ ದಾಳಿಗೆ ಬಲಿಯಾದ ವ್ಯಕ್ತಿಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಭೇಟಿ ನೀಡಿ ಮೃತ ಗುತ್ಯಪ್ಪನ ಅಂತಿಮ ದರ್ಶನ ಪಡೆದು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಭಾಗದಲ್ಲಿ ಕರಡಿ, ಚಿರತೆ, ಮಂಗಗಳ ಕಾಟ ಹೆಚ್ಚಾಗಿದೆ ಎಂದು ಗ್ರಾಮಸ್ಥರು ರೇಣುಕಾಚಾರ್ಯ ಬಳಿ ಹೇಳಿಕೊಂಡರು. ಈ ಬಗ್ಗೆ ಅರಣ್ಯ ಇಲಾಖೆ ಅಧಿಕಾರಿಗಳೊಂದಿಗೆ ರೇಣುಕಾಚಾರ್ಯ ಚರ್ಚಿಸಿದರು.


Spread the love

LEAVE A REPLY

Please enter your comment!
Please enter your name here