HomeKarnataka Newsದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 87 ಪ್ರಕರಣ ಭೇದಿಸಿ ₹3.91 ಕೋಟಿ ಮೌಲ್ಯದ ವಸ್ತು ವಾರಸುದಾರರಿಗೆ...

ದಾವಣಗೆರೆ ಪೊಲೀಸರ ಭರ್ಜರಿ ಕಾರ್ಯಾಚರಣೆ: 87 ಪ್ರಕರಣ ಭೇದಿಸಿ ₹3.91 ಕೋಟಿ ಮೌಲ್ಯದ ವಸ್ತು ವಾರಸುದಾರರಿಗೆ ಹಸ್ತಾಂತರ

For Dai;y Updates Join Our whatsapp Group

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸರು ವಿವಿಧ ಠಾಣೆಗಳಲ್ಲಿ ದಾಖಲಾಗಿದ್ದ 87 ಕಳವು ಪ್ರಕರಣಗಳನ್ನು ಭೇದಿಸಿ, ₹3.91 ಕೋಟಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡು ವಾರಸುದಾರರಿಗೆ ಹಸ್ತಾಂತರಿಸಿದ್ದಾರೆ.

2025ರ ಡಿಸೆಂಬರ್ 20ರಿಂದ 2026ರ ಜುಲೈ 20ರವರೆಗೆ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಪ್ರಕರಣಗಳ ತನಿಖೆ ನಡೆಸಿದ ಪೊಲೀಸರು, ಮೂವರು ಅಂತಾರಾಜ್ಯ ಆರೋಪಿಗಳನ್ನು ಬಂಧಿಸಿದ್ದಾರೆ.

ಪೊಲೀಸರು ವಶಪಡಿಸಿಕೊಂಡ ವಸ್ತುಗಳಲ್ಲಿ 1.66 ಕೆಜಿ ಚಿನ್ನಾಭರಣ, 18.56 ಕೆಜಿ ಬೆಳ್ಳಿ, ₹56.55 ಲಕ್ಷ ಮೌಲ್ಯದ 377 ಮೊಬೈಲ್‌ಗಳು, ₹22.94 ಲಕ್ಷ ಮೌಲ್ಯದ 31 ವಾಹನಗಳು ಹಾಗೂ ₹4 ಲಕ್ಷ ಮೌಲ್ಯದ ಕೃಷಿ ಉಪಕರಣಗಳು ಸೇರಿವೆ.

ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ‘ಪ್ರಾಪರ್ಟಿ ಪರೇಡ್’ ಕಾರ್ಯಕ್ರಮದಲ್ಲಿ ಜಪ್ತಿ ಮಾಡಿದ್ದ ವಸ್ತುಗಳನ್ನು ವಾರಸುದಾರರಿಗೆ ಹಸ್ತಾಂತರಿಸಲಾಯಿತು.

ಈ ವೇಳೆ ಮಾತನಾಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಶೇಖರ್ ಹೆಚ್.ಟಿ., ಕಳವು ಪ್ರಕರಣಗಳಲ್ಲಿ ಪತ್ತೆಯಾದ ಒಟ್ಟು ₹3,91,69,136 ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದು ಸಂಬಂಧಪಟ್ಟವರಿಗೆ ಮರಳಿ ನೀಡಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಸಂಚಾರ ನಿಯಮ ಉಲ್ಲಂಘಿಸಿ ವಾಹನಗಳಿಗೆ ಅಳವಡಿಸಿದ್ದ ಐಎಸ್‌ಐ ಗುರುತು ಇಲ್ಲದ ಸುಮಾರು 2 ಸಾವಿರಕ್ಕೂ ಹೆಚ್ಚು ಹೆಲ್ಮೆಟ್‌ಗಳು, ಕರ್ಕಶ ಶಬ್ದ ಮಾಡುವ 85 ಸೈಲೆನ್ಸರ್‌ಗಳು, 25 ಹಾರ್ನ್‌ಗಳು ಹಾಗೂ 10 ಸ್ಪೀಕರ್ ಡಕ್‌ಗಳನ್ನು ಪೊಲೀಸರು ಬುಲ್ಡೋಜರ್ ಮೂಲಕ ನಾಶಪಡಿಸಿದರು.

ಜಿಲ್ಲಾ ಪೊಲೀಸ್ ಸಿಬ್ಬಂದಿಯ ಕಾರ್ಯವನ್ನು ಶ್ಲಾಘಿಸಿದ ಎಸ್‌ಪಿ ಶೇಖರ್ ಹೆಚ್.ಟಿ., ಪ್ರಕರಣಗಳ ಪತ್ತೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲ ಸಿಬ್ಬಂದಿಗೆ ಅಭಿನಂದನೆ ಸಲ್ಲಿಸಿದರು.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img