ಬೆಂಗಳೂರಿನಲ್ಲಿ ಹಾಡುಹಗಲೇ ದರೋಡೆ:  ATMಗೆ ಹಣ ಸಾಗಿಸುವ ವಾಹನ ಅಡ್ಡಗಟ್ಟಿ 7.11 ಕೋಟಿ ರೂ. ಕಳ್ಳತನ.!

0
Spread the love

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಲ್ಲಿ ಹಾಡ ಹಗಲೇ ರಾಬರಿ ನಡೆದಿದ್ದು, ಸೆಂಟ್ರಲ್ ಟ್ಯಾಕ್ಸ್ ಆಫೀಸರ್ಸ್ಸೋಗಿನಲ್ಲಿ ಎಟಿಎಂಗೆ ಹಣ ಹಾಕುವ ವಾಹನ ಅಡ್ಡಗಟ್ಟಿದ ದುಷ್ಕರ್ಮಿಗಳು ಬರೋಬ್ಬರಿ 7.11 ಕೋಟಿ ಹಣ ದರೋಡೆ ಮಾಡಿದ್ದಾರೆ.

Advertisement

ಈ ಘಟನೆ ನಗರ ಅಶೋಕ ಪಿಲ್ಲರ್ ಬಳಿ ನಡೆದಿದೆ.ಸಿಎಂಎಸ್ ಕಂಪನಿಗೆ ಸೇರಿದ ವಾಹನದಿಂದ ಹಣ ರಾಬರಿ ಮಾಡಲಾಗಿದೆ. ಜೆಪಿ ನಗರ ಹೆಚ್ ಡಿ ಎಫ್ ಸಿ ಬ್ಯಾಂಕ್ ನಿಂದ ಹಣ ತರ್ತಿದ್ದ ಸಿಎಂಎಸ್ ವಾಹನವನ್ನು ಇನ್ನೋವಾ ಕಾರಿನಲ್ಲಿ ಬಂದ ರಾಬರ್ಸ್ ಅಡ್ಡಗಟ್ಟಿದ್ದಾರೆ.

ಈ ವೇಳೆ ನಾವು ಸೆಂಟ್ರಲ್ ಟ್ಯಾಕ್ಸ್ ಆಫೀಸರ್ಸ್, ಡಾಕ್ಯುಮೆಂಟ್ ವೆರಿಫೈ ಮಾಡಬೇಕು ಎಂದಿದ್ದಾರೆ. ಈ ವೇಳೆ ಹಣದ ಸಮೇತ ಸಿಬ್ಬಂದಿಯನ್ನ ಇನ್ನೋವಾ ಕಾರಿನಲ್ಲಿ ಕೂರಿಸಿಕೊಂಡಿದ್ದಾರೆ. ಡೈರಿ ಸರ್ಕಲ್ ಬಳಿ ಕರೆದೋಯ್ದು ಸಿಎಂಎಸ್ ಸಿಬ್ಬಂದಿ ಬಿಟ್ಟು ಹಣದ ಸಮೇತ ರಾಬರ್ಸ್ ಎಸ್ಕೇಪ್ ಆಗಿದ್ದಾರೆ. ಸುದ್ದಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


Spread the love

LEAVE A REPLY

Please enter your comment!
Please enter your name here