ಬೆಂಗಳೂರು:- DCM ಡಿಕೆ ಶಿವಕುಮಾರ್ ಅವರ ಮಾತಿಗೆ ಅವರದ್ದೇ ಪಕ್ಷದ ಕಾರ್ಯಕರ್ತರು ಕಿಮ್ಮತ್ತು ಕೊಟ್ಟಂತೆ ಕಾಣುತ್ತಿಲ್ಲ.
ಡಿಸಿಎಂ ಡಿಕೆ ಶಿವಕುಮಾರ್ ಅವರ ಎಚ್ಚರಿಕೆ ನೀಡಿದರೂ ಯುವ ಕಾಂಗ್ರೆಸ್ ನಾಯಕರ ಬ್ಯಾನರ್ಗಳು ಬೆಂಗಳೂರಿನಲ್ಲಿ ರಾರಾಜಿಸುತ್ತಿವೆ. ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಆಯ್ಕೆಯಾದ ಹಿನ್ನೆಲೆಯಲ್ಲಿ ಇಂದು ಅರಮನೆ ಮೈದಾನದಲ್ಲಿ ಪದಗ್ರಹಣ ಕಾರ್ಯಕ್ರಮ ನಡೆಯಲಿದೆ. ಯುವ ಸಂಕಲ್ಪ ಕಾರ್ಯಕ್ರಮ ಸಂಬಂಧ ನಗರದ ಹಲವೆಡೆ ಬ್ಯಾನರ್ ಹಾಕಲಾಗಿದೆ.
ಕಾರ್ಯಕ್ರಮಕ್ಕಾಗಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತವಾಗಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬ್ಯಾನರ್ ಕಟ್ಟಿದ್ದಾರೆ. ಈ ಬಗ್ಗೆ ವಿರೋಧ ವ್ಯಕ್ತಪಡಿಸಿ ಡಿಸಿಎಂ ಆಕ್ರೋಶ ಹೊರ ಹಾಕಿದ್ದರು.
ಎಚ್ಚರಿಕೆ ಬೆನ್ನಲ್ಲೇ ಕೆಲವು ಕಡೆ ಮಾತ್ರ ಯುವ ಕಾರ್ಯಕರ್ತರು ಬ್ಯಾನರ್ ತೆರವು ಮಾಡಿದ್ದಾರೆ. ಆದರೆ ಮೇಖ್ರಿ ಸರ್ಕಲ್, ಅರಮನೆ ಮೈದಾನ ರಸ್ತೆಯಲ್ಲಿ ಬ್ಯಾನರ್ ಗಳು ಈಗಲೂ ರಾರಾಜಿಸುತ್ತಿದೆ.