Bengaluru: ಹಾಡಹಗಲೇ‌‌ ಪುಂಡಾಟ, 15 ಮಂದಿಯಿಂದ ಯುವಕನ ಮೇಲೆ ಡೆಡ್ಲಿ ಅಟ್ಯಾಕ್!

0
Spread the love

ಬೆಂಗಳೂರು:ನಗರದ ವಿದ್ಯಾರಣ್ಯಪುರದ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ 15 ಜನ ಪುಂಡರು ಒಬ್ಬ ಯುವಕನ ಮೇಲೆ ಹಲ್ಲೆ ನಡೆಸುತ್ತಿರುವ ದೃಶ್ಯ ಸೆರೆಯಾಗಿದೆ.

Advertisement

ಸಾರ್ವಜನಿಕರು ವಿಡಿಯೋ ಸಮೇತ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಸಿಸಿಟಿವಿಯಲ್ಲೂ ಯುವಕನ ಮೇಲಿನ ಹಲ್ಲೆಯ ದೃಶ್ಯ ಸೆರೆಯಾಗಿದೆ. ವಿದ್ಯಾರಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ನರಸೀಪುರ ಬಳಿ ನಡೆದ ಘಟನೆಯಿದು. ಹಲ್ಲೆಗೊಳಗಾದವನು ಹಾಗೂ ಹಲ್ಲೆ ಮಾಡಿದವರ ಕುರಿತ ವಿವರಗಳನ್ನು ಪೊಲೀಸರು ಕಲೆಹಾಕುತ್ತಿದ್ದಾರೆ. ಹಲ್ಲೆಯಿಂದ‌ ಯುವಕನ‌ ಮುಖ ಮತ್ತು ಮೂಗಿನ‌ ಭಾಗಕ್ಕೆ ಗಂಭೀರ ಗಾಯಗಳಾಗಿವೆ. ಈ ಕುರಿತು ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಮತ್ತು ಈಶಾನ್ಯ ಡಿಸಿಪಿಗೆ ಟ್ಯಾಗ್ ಮಾಡಿ ಪೋಸ್ಟ್ ಮಾಡಲಾಗಿದೆ. ʼಬಿಎನ್‌ಎಸ್ 109 ಅಂದರೆ ಕೊಲೆ‌ ಯತ್ನ?ʼ ಎಂದು ಉಲ್ಲೇಖಿಸಿ ಪೋಸ್ಟ್‌ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here