ಗದಗ: ಸಾರಿಗೆ ಬಸ್ ಕಾರ ಡಿಕ್ಕಿ, ಒಂದೇ ಕುಟುಂಬದ ನಾಲ್ವರ ದುರ್ಮರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಗದಗ ಎಸ್ಪಿ ಬಿಎಸ್ ನೇಮಗೌಡ ಭೇಟಿ ಪರಿಶೀಲನೆ ನಡೆಸಿದ್ದಾರೆ. ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ಈ ಘಟನೆ ನಡೆದಿತ್ತು.
Advertisement
ಹಾವೇರಿ ಮೂಲಕದ ರುದ್ರಪ್ಪ ಅಂಗಡಿ(55),ಪತ್ನಿ ರಾಜೇಶ್ವರಿ(45),ಮಗಳು ಐಶ್ವರ್ಯ (16), ಮಗ ವಿಜಯ(12) ಮೃತದುರ್ದೈವಿಗಳು ಆಗಿದ್ದು, ಎಸ್ಪಿ ಬಿ.ಎಸ್ ನೇಮಗೌಡ ಜವರಾಯನ ಅಟ್ಟಹಾಸಕ್ಕೆ ಒಂದೇ ಕುಟುಂಬದ ನಾಲ್ವರ ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಪಡೆದಿದ್ದಾರೆ. ನರಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.