HomeGadag Newsಹಿಂದೂ ದೇವರ ಹೆಸರಿನಲ್ಲಿ ಅನ್ಯಧರ್ಮೀಯರ ವಂಚನೆ: ರಾಜು ಖಾನಪ್ಪನವರ

ಹಿಂದೂ ದೇವರ ಹೆಸರಿನಲ್ಲಿ ಅನ್ಯಧರ್ಮೀಯರ ವಂಚನೆ: ರಾಜು ಖಾನಪ್ಪನವರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಹಿಂದೂ ದೇವತೆಗಳ ಹೆಸರಿನಲ್ಲಿ ಅನ್ಯಧರ್ಮೀಯರು ನಡೆಸುತ್ತಿರುವ ಮೂಢನಂಬಿಕೆ ಹಾಗೂ ವಂಚನೆಯ ಕೃತ್ಯಗಳನ್ನು ತಡೆಯಲು ಹಿಂದೂ ಸಂಘಟನೆಗಳ ಒಕ್ಕೂಟ ಈ ಬಾರಿ ದೃಢ ಸಂಕಲ್ಪ ಮಾಡಿದೆ ಎಂದು ಕರ್ನಾಟಕ ರಾಜ್ಯ ಹಿಂದೂ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಎಚ್ಚರಿಸಿದರು.

ಮಂಗಳವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗದಗ ನಗರದ ಆಶ್ರಯ ಕಾಲನಿ ಮತ್ತು ನರಸಾಪುರ ಕಾಲನಿಗಳ ಕೆಲವು ಮುಸ್ಲಿಂ ಕುಟುಂಬಗಳು ಢೋಂಗಿ ಬಾಬಾಗಳ ಅವತಾರವೆತ್ತಿ ಯಲ್ಲಮ್ಮ, ದುರ್ಗಮ್ಮದೇವಿ ಹಾಗೂ ಬೀರಲಿಂಗೇಶ್ವರ ದೇವರ ಹೆಸರಿನಲ್ಲಿ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ. ಅಲ್ಲಾ ಒಬ್ಬನೇ ದೇವರು ಎನ್ನುವವರು ಹಿಂದೂ ದೇವತೆಗಳನ್ನು ತಮ್ಮ ಬಂಡವಾಳವನ್ನಾಗಿ ಮಾಡಿಕೊಳ್ಳುತ್ತಿರುವುದು ಖಂಡನೀಯ. ಮುಸ್ಲಿಂ ಧರ್ಮಗುರುಗಳು ಇಂತಹ ಕೃತ್ಯಗಳನ್ನು ಏಕೆ ತಡೆಯುತ್ತಿಲ್ಲ ಎಂದು ಅವರು ಪ್ರಶ್ನಿಸಿದರು.

ಕಳೆದ ನಾಲ್ಕೈದು ವರ್ಷಗಳಿಂದ ಶ್ರೀ ಛತ್ರಪತಿ ಶಿವಾಜಿ ಮಹಾರಾಜರ ಉತ್ಸವ ಸಮಿತಿ ವತಿಯಿಂದ ಮತಾಂತರ ನಿಷೇಧಕ್ಕೆ ಅನೇಕ ಕೆಲಸಗಳನ್ನು ಮಾಡಲಾಯಿತು. ಈ ಬಾರಿ ಹಿಂದೂ ದೇವರನ್ನು ಬಳಸಿಕೊಂಡು ವಂಚನೆ ಮಾಡುತ್ತಿರುವ ಅನ್ಯಧರ್ಮೀಯರ ವಿರುದ್ಧ ಜನರನ್ನು ಜಾಗೃತರನ್ನಾಗಿ ಮಾಡುವ ಸಂಕಲ್ಪ ಮಾಡಿದ್ದೇವೆ ಎಂದರು.

ಇದೇ ಸಂದರ್ಭದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಮತ್ತು ಸಂತ ಸೇವಾಲಾರ ಸಂದೇಶಗಳ ಭಿತ್ತಿಪತ್ರ ಅನಾವರಣಗೊಳಿಸಲಾಯಿತು. ಸುದ್ದಿಗೋಷ್ಠಿಯಲ್ಲಿ 2026ನೇ ಸಾಲಿನ ಜಯಂತಿ ಸಮಿತಿ ಅಧ್ಯಕ್ಷ ಪರಮೇಶ ನಾಯಕ, ಮುಖಂಡರಾದ ವಿರೂಪಾಕ್ಷಪ್ಪ ಹೆಬ್ಬಳ್ಳಿ, ಜಗದೀಶ ಪೂಜಾರ, ಮಹೇಶ, ಶಿವಯೋಗಿ ಹಿರೇಮಠ, ಪಿ.ಎಸ್. ಕಾಳೆ, ಸತೀಶ ಕುಂಬಾರ, ವೀರಣ್ಣ ಹೆಬಸೂರ, ಕಿರಣ ಹಿರೇಮಠ, ರಾಜು ಗದ್ದಿ, ಬಸವರಾಜ ಕುರ್ತಕೋಟಿ, ಸುರೇಶ ಹೆಬಸೂರ, ವೆಂಕಟೇಶ ದೊಡ್ಡಮನಿ, ವಿಶಾಲ ಗೋಕಾವಿ ಮುಂತಾದವರು ಉಪಸ್ಥಿತರಿದ್ದರು.

ಈ ವರ್ಷ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಜೊತೆಗೆ ಸಂತ ಸೇವಾಲಾಲ್ ಮಹಾರಾಜರ ಜಯಂತಿಯನ್ನು ಆಚರಿಸಬೇಕು ಎಂದು ಉತ್ಸವ ಸಮಿತಿಯ ಪ್ರಸಕ್ತ ಸಾಲಿನ ಅಧ್ಯಕ್ಷ ಪರಮೇಶ ನಾಯಕ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿದೆ. ಇದೇ ಫೆ. 19ರಂದು ಸಂಜೆ 5 ಗಂಟೆಗೆ ನಡೆಯುವ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ರಾಜು ಖಾನಪ್ಪನವರ ತಿಳಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!