ಬೆಂಗಳೂರು: ಶಾಸಕ ಯತ್ನಾಳ್ಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿಂದ ನೋಟಿಸ್ ನೀಡಲಾಗಿದೆ. ಸಚಿವ ಶಿವಾನಂದ ಪಾಟೀಲ್ ವಿರುದ್ಧ ಮಾನಹಾನಿಕರ ಹೇಳಿಕೆ ಹಿನ್ನೆಲೆ ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು.
Advertisement
ಲೋಕಸಭಾ ಚುನಾವಣೆ ವೇಳೆ ಯತ್ನಾಳ್ ಮಾಡಿದ್ದ ಭ್ರಷ್ಟಾಚಾರದ ಸುಳ್ಳು ಆರೋಪದಿಂದ ವರ್ಚಸ್ಸಿಗೆ ಧಕ್ಕೆಯಾಗಿದೆ. ಹೀಗಾಗಿ ಮಾನನಷ್ಟ ಪ್ರಕರಣ ದಾಖಲಿಸುವಂತೆ ಸಚಿವ ಶಿವಾನಂದ ಪಾಟೀಲ್ ಖಾಸಗಿ ದೂರು ನೀಡಿದ್ದರು. ಹೀಗಾಗಿ ಇದೀಗ ನೋಟಿಸ್ ನೀಡಲಾಗಿದೆ.