ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ಪ್ರಕರಣ: ಚಕ್ರವರ್ತಿ ಸೂಲಿಬೆಲೆಗೆ ಜಾಮೀನು ಮಂಜೂರು!

0
Spread the love

ರಾಯಚೂರು:- ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಅಪಮಾನಕರ ಭಾಷಣ ಮಾಡಿದ್ದ ಚಕ್ರವರ್ತಿ ಸೂಲಿಬೆಲೆಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.

Advertisement

ಚಕ್ರವರ್ತಿ ಸೂಲಿಬೆಲೆ ವಿರುದ್ಧ ರಾಯಚೂರಿನ ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಚಕ್ರವರ್ತಿ ಸೂಲಿಬೆಲೆ ನಿರೀಕ್ಷಣಾ ಜಾಮೀನಿಗೆ ಅರ್ಜಿ ಹಾಕಿದ್ದರು. ರಾಯಚೂರಿನ 1 ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಮಂಜೂರಾಗಿದೆ.

ಇನ್ನೂ ಜನವರಿ 18 ,2024 ರಂದು ಸಿರವಾರದಲ್ಲಿ ನಮೋ ಬ್ರಿಗೇಡ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಭಾಷಣ ಮಾಡಿದ್ದರು. ಭಾಷಣದಲ್ಲಿ ಕಲಬುರ್ಗಿ ಇಎಸ್‌ಐ ಆಸ್ಪತ್ರೆ ವಿಚಾರವಾಗಿ ಮಾತನಾಡಿ ಖರ್ಗೆ ವಿರುದ್ಧ ಅವಮಾನಕರ ಹೇಳಿಕೆ ನೀಡಿದ್ದರು ಎಂದು ಆರೋಪಿಸಲಾಗಿತ್ತು.

ಈ ಸಂಬಂಧ ಜನವರಿ 20ರಂದು ಸಿರವಾರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮೂಲ ಎಫ್‌ಐಆರ್ ನಲ್ಲಿ ಜಾತಿನಿಂದನೆ ಆರೋಪ ಮಾಡಲಾಗಿತ್ತು.

ಆದರೆ ಕಲಬುರ್ಗಿ ಹೈಕೋರ್ಟ್ ಜಾತಿನಿಂದನೆ ಆರೋಪದ ಎಫ್‌ಐಆರ್ ರದ್ದುಗೊಳಿಸಿತ್ತು.

ಬಳಿಕ ಚಕ್ರವರ್ತಿ ಸೂಲಿಬೆಲೆ ಅಪಮಾನಕರ ಭಾಷಣ, ದ್ವೇಷ ಭಾಷಣ ಪ್ರಕರಣ ಎದುರಿಸುತ್ತಿದ್ದರು. ಈ ವಿಚಾರವಾಗಿ ಇಂದು ಕೋರ್ಟ್​ನಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here