ಅಡುಗೆ ಸಿಬ್ಬಂದಿ ಬಳಿ ಲಂಚಕ್ಕೆ ಬೇಡಿಕೆ: ರೆಡ್ ಹ್ಯಾಂಡ್ ಆಗಿ “ಲೋಕಾ” ಬಲೆಗೆ ಬಿದ್ದ ಹಾಸ್ಟೆಲ್ ವಾರ್ಡನ್!

0
Spread the love

ಕಲಬುರಗಿ:- ಅಡುಗೆ ಸಹಾಯಕರಿಗೆ ತಿಂಗಳ ಹಾಜರಾತಿ ‌ನೀಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಹಾಸ್ಟೆಲ್ ವಾರ್ಡನ್ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.

Advertisement

ಕಲಬುರಗಿ ತಾಲೂಕ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಘಟನೆ ಜರುಗಿದ್ದು, ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದ ಹಾಸ್ಟೆಲ್ ವಾರ್ಡನ್ ಶಿವಶರಣಪ್ಪ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ ಎನ್ನಲಾಗಿದೆ.

ವಾರ್ಡನ್ ಶಿವಶರಣಪ್ಪ ಅವರು, ಅಡುಗೆ ಸಹಾಯಕ ಶ್ರೀಮಂತ ಬಳಿ ತಿಂಗಳ ಹಾಜರಾತಿ ‌ನೀಡಲು 20 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಕಚೇರಿಯಲ್ಲಿ 15 ಸಾವಿರ ಮುಂಗಡ ಹಣ ಪಡೆಯುವಾಗ ರೆಡ್‌ಹ್ಯಾಂಡ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಗೀತಾ ಬೆನಾಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ ಎನ್ನಲಾಗಿದೆ.


Spread the love

LEAVE A REPLY

Please enter your comment!
Please enter your name here