ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ!

0
Spread the love

ಮಂಗಳೂರು:- ಲಂಚಕ್ಕೆ ಬೇಡಿಕೆಯಿಟ್ಟ ಹಿನ್ನೆಲೆ ಮುಲ್ಕಿ ಆರ್‌ಐ ಲೋಕಾಯುಕ್ತ ಬಲೆಗೆ ಬಿದ್ದಿರುವಂತಹ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಜಂಕ್ಷನ್ ಬಳಿ ಜರುಗಿದೆ.

Advertisement

4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಕಂದಾಯ ನಿರೀಕ್ಷಕ ಜಿ.ಎಸ್.ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಜಿ.ಎಸ್.ದಿನೇಶ್​ ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಒಂದು ವರ್ಷದಿಂದ ಕ್ರಮಕೈಗೊಂಡಿರಲಿಲ್ಲ. ಲಂಚಕ್ಕೆ ಬೇಡಿಕೆ ಸಂಬಂಧ ಮಂಗಳೂರು ಲೋಕಾಯುಕ್ತ ಕಚೇರಿಗೆ ಸಂತ್ರಸ್ತ ವ್ಯಕ್ತಿ ದೂರು ನೀಡಿದ್ದರು.

ದೂರಿನ ಮೇರೆಗೆ ಲೋಕಾಯುಕ್ತ ಎಸ್‌ಪಿ ನಟರಾಜ್ ನೇತೃತ್ವದಲ್ಲಿ ದಾಳಿ ಮಾಡಲಾಗಿದ್ದು, ಅಧಿಕಾರಿಯನ್ನು ಅರೆಸ್ಟ್ ಮಾಡಲಾಗಿದೆ.


Spread the love

LEAVE A REPLY

Please enter your comment!
Please enter your name here