ಬೈಕ್ ಬಿಡಲು ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್, ಸಿಬ್ಬಂದಿ!

0
Spread the love

ಮಂಗಳೂರು:- ಜಪ್ತಿ ಮಾಡಿದ್ದ ಸ್ಕೂಟರ್ ಬಿಡುಗಡೆಗೆ ನ್ಯಾಯಾಲಯವೇ ಆದೇಶ ಹೊರಡಿಸಿದರೂ ಸವಾರನ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಸಂಚಾರಿ ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಿಬ್ಬಂದಿಯನ್ನು ಲೋಕಾಯುಕ್ತ ಅಧಿಕಾರಿಗಳು ಅರೆಸ್ಟ್ ಮಾಡಿದ್ದಾರೆ.

Advertisement

ಮಂಗಳೂರು ಉತ್ತರ ಸಂಚಾರಿ ಠಾಣೆಯ ಇನ್‌ಸ್ಪೆಕ್ಟರ್ ಮಹಮ್ಮದ್ ಶರೀಫ್ ಮತ್ತು ಪೊಲೀಸ್ ಸಿಬ್ಬಂದಿ ಪ್ರವೀಣ್ ಲೋಕಾಯುಕ್ತ ಬಲೆಗೆ ಬಿದ್ದವರು. ವಶಪಡಿಸಿಕೊಂಡಿದ್ದ ಸ್ಕೂಟರ್ ಅನ್ನು ಬಿಡುಗಡೆ ಮಾಡಲು 3ಸಾವಿರ ರೂ. ಸ್ವೀಕರಿಸುತ್ತಿದ್ದಾಗಲೇ ಲೋಕಾ ಬಲೆಗೆ ಬಿದ್ದಿದ್ದಾರೆ.

ವ್ಯಕ್ತಿಯೊಬ್ಬರ ಸ್ಕೂಟರ್ ಅನ್ನು ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯಿಂದ ಬಿಡುಗಡೆಗೊಳಿಸಲು ನ್ಯಾಯಾಲಯದಿಂದ ಆದೇಶವಾಗಿತ್ತು. ಈ ಬಗ್ಗೆ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್‌ರನ್ನು ಭೇಟಿ ಮಾಡಿದಾಗ 5000ರೂ. ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ವ್ಯಕ್ತಿ ದೂರು ನೀಡಿದ್ದರು. ಅದರಂತೆ ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಸೋಮವಾರ ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹಮ್ಮದ್ ಶರೀಫ್ ಕೆ. ಮತ್ತು ಸಿಬ್ಬಂದಿ ಪ್ರವೀಣ್ ನಾಯ್ಕ ವ್ಯಕ್ತಿ ಬಳಿ ಮುಂಗಡವಾಗಿ 3000ರೂ. ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದಾರೆ.

ಭ್ರಷ್ಟರನ್ನು ಲೋಕಾ ಪೊಲೀಸರು ತನಿಖೆಗೆ ಒಳಪಡಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here