ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

0
KSRTC
Spread the love

ವಿಜಯಸಾಕ್ಷಿ ಸುದ್ದಿ, ಗದಗ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಗದಗ ವಿಭಾಗವು ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ವಾ.ಕ.ರ.ಸಾ ಸಂಸ್ಥೆಯ ಗದಗ ವಿಭಾಗೀಯ ಕಚೇರಿಯ ಎದುರಿಗೆ ಒಂದು ದಿನದ ಉಪವಾಸ ಸತ್ಯಾಗ್ರಹ ನಡೆಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಮೂಲಕ ಸರಕಾರಕ್ಕೆ ಮನವಿ ಸಲ್ಲಿಸಿತು.

Advertisement

೧-೧-೨೦೨೪ರಿಂದ ಜಂಟಿ ಕ್ರಿಯಾ ಸಮಿತಿ ಜೊತೆ ಚರ್ಚಿಸಿ ಮೂಲ ವೇತನಕ್ಕೆ ಶೇ. ೨೫ರಷ್ಟು ಹೆಚ್ಚಿಸಿ ಇತರ ಸೌಲಭ್ಯಗಳನ್ನು ನೀಡಬೇಕು, ೧-೧-೨೦೨೦ರಿಂದ ೨೮-೮-೨೦೨೩ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ವೇತನ ಪರಿಷ್ಕರಣೆ ಬಾಕಿ ಜೊತೆಗೆ ನಿವೃತ್ತಿ ಸೌಲಭ್ಯಗಳ ಬಾಕಿ ಹಣ ಪಾವತಿಸಬೇಕು, ಹಾಲಿ ಸಿಬ್ಬಂದಿಗೆ ೧-೧-೨೦೨೦ರಿಂದ ೩೮ ತಿಂಗಳ ವೇತನ ಪರಿಷ್ಕರಣೆ ಬಾಕಿ ಕೂಡಲೇ ಪಾವತಿಸಬೇಕು, ಶಕ್ತಿ ಯೋಜನೆ ಅಡಿ ಅನುದಾನವನ್ನು ಕೂಡಲೇ ಸಾರಿಗೆ ನಿಗಮಗಳಿಗೆ ಪಾವತಿಸಬೇಕು, ಶಕ್ತಿ ಯೋಜನೆ ಇನ್ನೂ ಹೆಚ್ಚು ಪರಿಣಾಮಕಾರಿಯಾಗಿ ನಿರ್ವಹಿಸಲು ಹೆಚ್ಚು ಬಸ್ಸುಗಳನ್ನು ನೀಡಬೇಕು, ಸಿಬ್ಬಂದಿಯನ್ನು ನೇಮಕಾತಿ ಮಾಡಿಕೊಳ್ಳಬೇಕು. ಇತರ ಬೇಡಿಕೆಗಳನ್ನು ಮಾತುಕತೆಯ ಮೂಲಕ ಬಗೆಹರಿಸಬೇಕು ಇವೇ ಮುಂತಾದ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮುಂದಿನ ಕ್ರಮಕ್ಕಾಗಿ ಮೇಲಾಧಿಕಾರಿಗಳಿಗೆ, ಸರಕಾರಕ್ಕೆ ಕಳುಹಿಸುವದಾಗಿ ಹೇಳಿದರು.

ಸತ್ಯಾಗ್ರಹದ ನೇತೃತ್ವವನ್ನು ಕೆ.ಎಸ್.ಆರ್.ಟಿ.ಸಿ ಸ್ಟಾಫ್ ಆ್ಯಂಡ್ ವರ್ಕರ್ಸ್ ಯುನಿಯನ್ ಗದಗ ಅಧ್ಯಕ್ಷ ಶಾಂತಣ್ಣ ಮುಳವಾಡ, ಪ್ರಧಾನ ಕಾರ್ಯದರ್ಶಿ ಗೋಪಾಲ ರಾಯರು, ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಮಹಾಮಂಡಳ ಗದಗ ಅಧ್ಯಕ್ಷ ಬಿ.ಎಚ್. ರಾಮೇನಹಳ್ಳಿ, ಪ್ರಧಾನ ಕಾರ್ಯದರ್ಶಿ ಎಸ್.ಕೆ. ಅಯ್ಯನಗೌಡರ, ಕ.ರಾ.ರ.ಸಾ ಸಂಸ್ಥೆ ಪ.ಜಾ/ಪ.ಪಂ ನೌಕರರ ಸಂಘ ಗದಗ ಉಪಾಧ್ಯಕ್ಷ ನಾಗರಾಜ ಬಳ್ಳಾರಿ, ಪ್ರಧಾನ ಕಾರ್ಯದರ್ಶಿ ಎಚ್.ಸಿ. ಕೊಪ್ಪಳ, ವಾ.ಕ.ರ.ಸಾ ಸಂಸ್ಥೆ ಪ.ಜಾ/ಪ.ಪಂ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಗದಗ ಪ್ರಧಾನ ಕಾರ್ಯದರ್ಶಿ ಎಂ.ಆಂಜನೇಯ, ಖಜಾಂಚಿ ಎಸ್.ಎಫ್.ಸಂಗಣ್ಣವರ ವಹಿಸಿದ್ದರು.

ಈ ಹಿಂದೆ ಜಂಟಿ ಸಮಿತಿಯ ಮುಖಂಡರು ಮುಖ್ಯಮಂತ್ರಿ, ಸಾರಿಗೆ ಸಚಿವರನ್ನು ಭೇಟಿಯಾಗಿ ಎಲ್ಲ ಸಮಸ್ಯೆ ಹಾಗೂ ಬೇಡಿಕೆಗಳನ್ನು ಮನವಿ ಮಾಡಿಕೊಳ್ಳಲಾಗಿತ್ತು. ಫೆ. ೧೪ರಂದು ಬೆಂಗಳೂರಿನಲ್ಲಿ ಜಂಟಿ ಕ್ರಿಯಾ ಸಮಿತಿಯು ದಿ.ಗುಂಡೂರಾವ್ ಹಾಲ್‌ನಲ್ಲಿ ಸಭೆ ನಡೆಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರಕಾರವನ್ನು ಒತ್ತಾಯಿಸಲಾಗಿತ್ತು.


Spread the love

LEAVE A REPLY

Please enter your comment!
Please enter your name here