ಕೊಳಗೇರಿ ಜನರಿಗೆ ಇ-ಖಾತಾ ವಿತರಿಸಲು ಆಗ್ರಹ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ-ಬೆಟಗೇರಿ ನಗರದ ಕೊಳಗೇರಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಯಾವುದೇ ಸೌಲಭ್ಯಗಳಿಲ್ಲದೇ ವಾಸ ಮಾಡುತ್ತಿದ್ದಾರೆ. ಸರ್ಕಾರಿ ಭೂಮಿಯಲ್ಲಿರುವ ಸ್ಲಂ ಪ್ರದೇಶದ ಕುಟುಂಬಗಳಿಗೆ ಸ್ಲಂ ಬೋರ್ಡ್ನಿಂದ ಈಗಾಗಲೇ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಇಂತಹ ಕುಟುಂಬಗಳಿಗೆ ರಾಜ್ಯ ಸರ್ಕಾರದ ಆದೇಶದಂತೆ ಇ-ಖಾಖಾ ವಿತರಿಸಲು ಸ್ಲಂ ಬೋರ್ಡ್ ಅಧಿಕಾರಿಗಳು ನಗರಸಭೆಗೆ ಮಾಹಿತಿಯನ್ನು ನೀಡಬೇಕೆಂದು ಸ್ಲಂ ಜನಾಂದೋಲನ-ಕರ್ನಾಟಕ ಮತ್ತು ಗದಗ ಜಿಲ್ಲಾ ಸ್ಲಂ ಸಮಿತಿ ಪದಾಧಿಕಾರಿಗಳು ಸ್ಲಂ ಬೋರ್ಡ್ ಅಧಿಕಾರಿಗಳಿಗೆ ಮನವಿ ನೀಡಿ ಆಗ್ರಹಿಸಿದರು.

Advertisement

ಗದಗ ಜಿಲ್ಲಾ ಸ್ಲಂ ಸಮಿತಿ ಅಧ್ಯಕ್ಷ ಇಮ್ತಿಯಾಜ್ ಆರ್.ಮಾನ್ವಿ ಮಾತನಾಡಿ, ಗದಗ-ಬೆಟಗೇರಿ ನಗರದಲ್ಲಿ ಅನೇಕ ಸ್ಲಂ ಪ್ರದೇಶದ ಕುಟುಂಬಗಳಿಗೆ ಹಕ್ಕುಪತ್ರಗಳನ್ನು ವಿತರಿಸಲಾಗಿದೆ. ಆದರೆ ಈ ಕುಟುಂಬಗಳಿಗೆ ಭೂ ಮಾಲಿಕತ್ವ ನೀಡಲು ಅಧಿಕಾರಿಗಳಿಂದ ಸಾಧ್ಯವಾಗಿಲ್ಲ. ಈ ಹಿಂದೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ 94ಸಿಸಿ ಯೋಜನೆಡಿಯಲ್ಲಿ ನೂರಾರು ಕುಟುಂಬಗಳು ತಮ್ಮಗೆ ಭೂ ಮಾಲಿಕತ್ವ ನೀಡಬೇಕೆಂದು ಅರ್ಜಿಗಳನ್ನು ಸಲ್ಲಿಸಿದ್ದರೂ ಕಂದಾಯ ಇಲಾಖೆಯವರು ಯಾವುದೇ ಕ್ರಮ ಕೈಗೊಳ್ಳಲಿಲ್ಲ.

ಸ್ಲಂ ಜನರ ಬೇಡಿಕೆಗಳಿಗೆ ಅಧಿಕಾರಿಗಳು ಪ್ರಾಮಾಣಿಕವಾಗಿ ಸ್ಪಂದಿಸದಿದ್ದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಸ್ಲಂ ಸಮಿತಿ ಮುಖಂಡರಾದ ಇಬ್ರಾಹಿಂ ಮುಲ್ಲಾ, ಮೌಲಾಸಾಬ ಗಚ್ಚಿ, ಮೆಹಬೂಬಸಾಬ ಬಳ್ಳಾರಿ, ಮೆಹರುನಿಸಾ ಡಂಬಳ, ಮಂಜುನಾಥ ಶ್ರೀಗಿರಿ, ದುರ್ಗಪ್ಪ ಮಣ್ಣವಡರ, ಖಾಜಾಸಾಬ ಇಸ್ಮಾಯಿಲನವರ, ಮೈಮುನ ಬೈರಕದಾರ, ಶಂಕ್ರಪ್ಪ ಪೂಜಾರ, ಜಂದಿಸಾಬ ಬಳ್ಳಾರಿ, ಸಲೀಂ ಹರಿಹರ, ಸಾಕ್ರುಬಾಯಿ ಗೋಸಾ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here