ದಾವಣಗೆರೆ:- ರಾಜ್ಯದಲ್ಲಿ ಡೆಂಗ್ಯೂ ಆರ್ಭಟ ದಿನೇ ದಿನೇ ಹೆಚ್ಚಾಗುತ್ತಿದ್ದು ಸಾವಿನ ಸಂಖ್ಯೆ ಒಂಭತಕ್ಕೆ ಏರಿಕೆ ಆಗಿದೆ. ಅದರಂತೆ ಜ್ವರದಿಂದ ಬಳಲುತ್ತಿದ್ದ ದಾವಣಗೆರೆಯ ಯುವತಿಯೊಬ್ಬರು ಸಾವಿಗೀಡಾಗಿದ್ದಾರೆ.
Advertisement
ರೇಖಾ ಎನ್ (19) ಸಾವನ್ನಪ್ಪಿದ ಯುವತಿ. ದಾವಣಗೆರೆ ಜಿಲ್ಲೆಯ ಜಗಳೂರ ಪಟ್ಟಣದ ರಾಮಾಲಯ ರಸ್ತೆ ನಿವಾಸಿ ರೇಖಾ ಕಳೆದ ಕೆಲ ದಿನಗಳ ಹಿಂದೆ ನಾಮಕರಣ ಶಾಸ್ತ್ರ ಕಾರ್ಯಕ್ರಮಕ್ಕೆ ಬಳ್ಳಾರಿಗೆ ತೆರಳಿದ್ದರು. ಅಲ್ಲಿ ತೀವ್ರ ಜ್ವರದಿಂದ ಬಳಲಿದ್ದ ರೇಖಾಗೆ ಬಳ್ಳಾರಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ