ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿ ಕಾಮೆಂಟ್: ಕ್ರಮಕ್ಕೆ ಆಗ್ರಹಿಸಿ ದೂರು ದಾಖಲು

0
Spread the love

ಬೆಂಗಳೂರು: ಹಿಂದೂ ದೇವರುಗಳ ಬಗ್ಗೆ ಅವಹೇಳನಕಾರಿಯಾಗಿ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮಹಾಲಕ್ಷ್ಮಿ ಲೇಔಟ್ ಠಾಣೆಯಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದಿಂದ ದೂರು ನೀಡಲಾಗಿದೆ. ದೂರು ನೀಡಿದ ನಂತರ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಉಪಾಧ್ಯಕ್ಷ ರಾಘವೇಂದ್ರ ಭಟ್ ಪ್ರತಿಕ್ರಿಯೆ ನೀಡಿ, ಹೊರನಾಡು ಅನ್ನಪೋರ್ಣೇಶ್ವರಿ, ಶೃಂಗೇರಿ ಶಾರದಂಭೆ, ಮೂಕಾಂಬಿಕೆ ಬಗ್ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದ್ದಾರೆ.

Advertisement

ಅಂಜುಮ್ ಶೇಖ್ ಎಂಬಾತ ಅವಾಶ್ಯ ಶಬ್ದಗಳಿಂದ ನಿಂದಿಸಿ ಕಾಮೆಂಟ್ ಮಾಡಿರುವುದು ನಮಗೆ ಅತ್ಯಂತ ನೋವುಂಟು ಆಗಿದೆ. ಇಂತವರ ಮೇಲೆ ಕ್ರಮಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದೇವೆ. ಅವರ ಧರ್ಮದ ಬಗ್ಗೆ ಕಾಮೆಂಟ್ ಮಾಡಿದ್ದಕ್ಕೆ ಪೊಲೀಸ್ ಠಾಣೆ, ಶಾಸಕರ ಮನೆಗೆ ಬೆಂಕಿ ಹಚ್ಚಿದ್ದಾರೆ. ನಾವು ಅವರ ತರಹ ಬೆಂಕಿ ಹಚ್ಚುವ ಕೆಲಸ ಮಾಡಲ್ಲ, ಕ್ರಮಕ್ಕೆ ಆಗ್ರಹಿಸಿ ದೂರು ನೀಡಿದ್ದೇವೆ ಅಷ್ಟೆ, ನಾವು ರಾಮನ ತರಹ ಇದ್ದೀವಿ, ಆದರೆ ಪರಶುರಾಮ ಆಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here