ಬೆಂಗಳೂರು: ಸಚಿವ ಎನ್. ಚಲುವರಾಯಸ್ವಾಮಿ ಅವರ ವರ್ಚಸ್ಸು ಮತ್ತು ಘನತೆಗೆ ಧಕ್ಕೆ ತರುವ ದುರುದ್ದೇಶದಿಂದ ಸಾರ್ವಜನಿಕವಾಗಿ ಆಧಾರರಹಿತ ಮತ್ತು ಅವಹೇಳನಕಾರಿ ಹೇಳಿಕೆಗಳನ್ನು ನೀಡಿದ್ದ ನಾಗಮಂಗಲ ಮಾಜಿ ಶಾಸಕ ಸುರೇಶ್ ಗೌಡ ವಿರುದ್ಧ ದಾಖಲಾಗಿತ್ತು. ಇನ್ನೂ ಇದಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯಕ್ಕೆ ಹಾಜರಾದ ಮಾಜಿ ಶಾಸಕ ಸುರೇಶ್ ಗೌಡ, ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದಾರೆ.
ಹೌದು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಸಚಿವ ಚಲುವರಾಯಸ್ವಾಮಿಯವರು ಸಲ್ಲಿಸಲಾಗಿದ್ದ ದೂರಿನ ಅನ್ವಯ, ಸುರೇಶ್ ಗೌಡ ಅವರು ಚಲುವರಾಯಸ್ವಾಮಿ ಅವರ ಘನತೆ, ಗೌರವ ಮತ್ತು ವರ್ಚಸ್ಸಿಗೆ ಧಕ್ಕೆ ತರುವ ಉದ್ದೇಶದಿಂದ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದರು.
ಇಂದು ನ್ಯಾಯಾಲಯಕ್ಕೆ ಹಾಜರಾದ ಮಾಜಿ ಶಾಸಕ ಸುರೇಶ್ ಗೌಡ ಸಲ್ಲಿಸಲಾದ ಜಂಟಿ ಮೆಮೊದಲ್ಲಿ, ಸುರೇಶ್ ಗೌಡ ಅವರು ತಾವು ಮಾಡಿದ ಯಾವುದೇ ಹೇಳಿಕೆಗಳಿಂದ ಸಚಿವ ಚಲುವರಾಯಸ್ವಾಮಿ ಅವರಿಗೆ ನೋವಾಗಿದ್ದರೆ ಅಥವಾ ಅವರ ಘನತೆಗೆ ಧಕ್ಕೆಯಾಗಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ನನ್ನ ಯಾವುದೇ ಹೇಳಿಕೆಯಿಂದ ದೂರುದಾರರಿಗೆ ನೋವಾಗಿದ್ದರೆ,
ಯಾವುದೇ ದುರುದ್ದೇಶವಿಲ್ಲದೆ ಈ ಹೇಳಿಕೆಯನ್ನು ನೀಡಲಾಗಿದೆ, ಮತ್ತು ದೂರುದಾರರಿಗೆ ಅಥವಾ ದೂರುದಾರರ ಘನತೆಗೆ ಧಕ್ಕೆ ತರುವ ಅಥವಾ ದೂರುದಾರರನ್ನು ಮಾನಹಾನಿ ಮಾಡುವ ಯಾವುದೇ ಉದ್ದೇಶವಿರಲಿಲ್ಲ. ಆರೋಪಿಯು ನೀಡಿದ ಯಾವುದೇ ಹೇಳಿಕೆ ದೂರುದಾರರಿಗೆ ನೋವುಂಟು ಮಾಡಿದ್ದರೆ, ಆರೋಪಿಯು ದೂರುದಾರರಲ್ಲಿ ವಿಷಾದ ವ್ಯಕ್ತಪಡಿಸುತ್ತಾನೆ ಎಂದು ಮೆಮೊದಲ್ಲಿ ತಿಳಿಸಲಾಗಿದೆ.