ಬೆಂಗಳೂರು: 20-30 ವರ್ಷಗಳಿಂದ ಸಾಗುವಳಿ ಚೀಟಿ ಇದ್ದರೂ ಖಾತೆ ಮಾಡಿಕೊಡಲು ಆಗಿಲ್ಲ ಎಂದು ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಮಾತನಾಡಿದ ಅವರು, ಸಾಗುವಳಿ ಚೀಟಿ ಕೊಟ್ಟವರಿಗೆ ಇನ್ನೂ ಖಾತೆ ಆಗಿಲ್ಲ ಅನ್ನೋದು ಸತ್ಯ. 20-30 ವರ್ಷಗಳಿಂದ ಸಾಗುವಳಿ ಚೀಟಿ ಇದ್ದರೂ ಖಾತೆ ಮಾಡಿಕೊಡಲು ಆಗಿಲ್ಲ.
Advertisement
ನೈಜವಾಗಿ ಇರುವ ಕೇಸಲ್ಲಿ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ. ಅಧಿಕಾರಿಗಳಿಗೂ ಖಾತೆ ಮಾಡಲು ಸೂಚನೆ ಕೊಟ್ಟಿದ್ದೇನೆ. ಅನೇಕ ಕೇಸ್ಗಳಲ್ಲಿ ಅಕ್ರಮವಾಗಿ ಭೂಮಿ ಹಂಚಿಕೆಯಾಗಿದೆ. ಅರಣ್ಯ ಭಾಗದಲ್ಲಿ ಹಂಚಿಕೆ ಆಗಿರುವುದಕ್ಕೆ ದಾಖಲಾತಿ ಮಾಡಿಕೊಡಲು ಆಗುವುದಿಲ್ಲ. ಅದನ್ನು ಪರಿಶೀಲನೆ ಮಾಡಬೇಕು. ನೈಜವಾಗಿ ಹಂಚಿಕೆ ಆಗಿರುವವರಿಗೆ ಆದಷ್ಟು ಬೇಗ ಖಾತೆ ಮಾಡಿಕೊಡುತ್ತೇವೆ ಎಂದು ಭರವಸೆ ನೀಡಿದರು.