Homecultureಶ್ರೀ ರಂಭಾಪುರಿ ಜಗದ್ಗುರುಗಳ ಏಪ್ರಿಲ್ ಮಾಸದ ಪ್ರವಾಸದ ವಿವರ

ಶ್ರೀ ರಂಭಾಪುರಿ ಜಗದ್ಗುರುಗಳ ಏಪ್ರಿಲ್ ಮಾಸದ ಪ್ರವಾಸದ ವಿವರ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬಾಳೆಹೊನ್ನೂರು : ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳ ಏಪ್ರಿಲ್ ತಿಂಗಳ ಪ್ರವಾಸ ಕಾರ್ಯಕ್ರಮ ಈ ಕೆಳಗಿನಂತಿವೆ.

ಏ. 1ರಂದು ಬೈಲಹೊಂಗಲದ ವಣ್ಣೂರು ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಮಾರಂಭ, 2ರಂದು ತೀರ್ಥಹಳ್ಳಿಯ ಕವಲೇದುರ್ಗ ಮಠದಲ್ಲಿ ಇಷ್ಟಲಿಂಗ ಮಹಾಪೂಜಾ, 3ರಂದು ರಾಣೆಬೆನ್ನೂರಿನ ಲಿಂಗದಹಳ್ಳಿಯಲ್ಲಿ ಇಷ್ಟಲಿಂಗ ಮಹಾಪೂಜಾ, 4ರಂದು ಅಜ್ಜಂಪುರದ ಗೌರಾಪುರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 5ರಂದು ಹೊನ್ನಾಳಿಯ ಕುಳಗಟ್ಟಿಯಲ್ಲಿ ಇಷ್ಟಲಿಂಗ ಮಹಾಪೂಜಾ, 6ರಂದು ಕಡೂರಿನ ಹೊಗರೆಖಾನ್ ಗ್ರಾಮದಲ್ಲಿ ಶ್ರೀ ಸಿದ್ದೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭ, 7ರಂದು ಚಿಕ್ಕಮಗಳೂರಿನ ಮುತ್ತಿನಪುರದ ಶ್ರೀ ವೀರಭದ್ರೇಶ್ವರ ಕ್ಷೇತ್ರದಲ್ಲಿ ಮಂಡಲ ಪೂಜಾ ಸಮಾರಂಭದ ಸಾನ್ನಿಧ್ಯ ವಹಿಸುವರು.

ಹುಬ್ಬಳ್ಳಿ ತಾಲೂಕ ತಿರುಮಲಕೊಪ್ಪದ ಶ್ರೀ ಜಗದ್ಗುರು ರೇಣುಕ ಧರ್ಮ ನಿವಾಸದಲ್ಲಿ 8ರಂದು ಧರ್ಮ ಜಾಗೃತಿ ಸಮಾರಂಭ, 9ರಂದು ಶ್ರೀ ಜಗದ್ಗುರು ಪಂಚಾಚಾರ್ಯ ಯುಗಮಾನೋತ್ಸವ ಹಾಗೂ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಸಮಾರಂಭ, 10ರಂದು ಹುಬ್ಬಳ್ಳಿಯಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಸಮಾರಂಭ, 11-12ರಂದು ಧಾರವಾಡದ ಅಮ್ಮಿನಭಾವಿಯಲ್ಲಿ ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸುವರು.

13ರಂದು ಹುಬ್ಬಳ್ಳಿಯ ಹಳ್ಳಿಯಾಳದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ರಥೋತ್ಸವ ಹಾಗೂ ಧರ್ಮ ಸಮಾರಂಭ, 14ರಂದು ಹಾವೇರಿಯ ನೆಗಳೂರಿನಲ್ಲಿ ಕಳಸಾರೋಹಣ ಮತ್ತು ಸಾಮೂಹಿಕ ವಿವಾಹ ಸಮಾರಂಭ, 15ರಂದು ಕಲಘಟಗಿಯ ಸಂಗೇದೇವರಕೊಪ್ಪದಲ್ಲಿ ನೂತನ ದೇವಾಲಯ ಉದ್ಘಾಟನಾ ಸಮಾರಂಭ, 16ರಂದು ಕಲಘಟಗಿ ತಾಲೂಕ ಬೇಗೂರು ಗ್ರಾಮದಲ್ಲಿ ಗ್ರಾಮದೇವಿ ಪ್ರತಿಷ್ಠಾಪನಾ ಸಮಾರಂಭ, 17ರಂದು ಚಡಚಣ ತಾಲೂಕ ಏಳಗಿ ಪಿ.ಎಸ್. ಗ್ರಾಮದಲ್ಲಿ ಶ್ರೀ ವೀರಭದ್ರಸ್ವಾಮಿ ಮಹಾದ್ವಾರ ಉದ್ಘಾಟನಾ ಸಮಾರಂಭ, 18ರಂದು ಅಫಜಲಪುರ ತಾಲೂಕ ಕರಜಗಿಯಲ್ಲಿ ಶ್ರೀ ಮಲ್ಲಿಕಾರ್ಜುನ ದೇವಸ್ಥಾನ ಕಳಸಾರೋಹಣ, 19ರಂದು ಚಿತ್ತಾಪುರದ ಶ್ರೀ ಸಿದ್ಧೇಶ್ವರ ಜ್ಞಾನಧಾಮದಲ್ಲಿ ಧರ್ಮ ಸಮಾರಂಭ 23ರಂದು ಬಾಳೆಹೊನ್ನೂರು ಶ್ರೀ ಜಗದ್ಗುರು ರಂಭಾಪುರಿ ಮಹಾಪೀಠದಲ್ಲಿ ಪೌರ್ಣಿಮೆಯ ನಿಮಿತ್ಯ ವಾಸ್ತವ್ಯ ಮಾಡಿ ಭಕ್ತಾದಿಗಳಿಗೆ ದರ್ಶನ ಆಶೀರ್ವಾದ ನೀಡುವರು.

29ರಂದು ಕುಂದಗೋಳದ ಪಶುಪತಿಹಾಳದಲ್ಲಿ ಧರ್ಮ ಜಾಗೃತಿ ಸಮಾರಂಭದ ಸಾನ್ನಿಧ್ಯ ವಹಿಸುವರು ಎಂದು ಶ್ರೀ ಪೀಠದ ವಾರ್ತಾ ಸಂಯೋಜನಾಧಿಕಾರಿ ಸಿ.ಎಚ್. ಬಾಳನಗೌಡ್ರ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!