HomeIndia Newsನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ!

ನೇಪಾಳದಲ್ಲಿ ವಿನಾಶಕಾರಿ ಪ್ರವಾಹ: ಸಾವಿನ ಸಂಖ್ಯೆ 1,127ಕ್ಕೆ ಏರಿಕೆ!

ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹ ಹಾಗೂ ಸರಣಿ ಭೂಕುಸಿತಗಳಿಂದ ಸಾವನ್ನಪ್ಪಿದವರ ಸಂಖ್ಯೆ 1127ಕ್ಕೆ ಏರಿಕೆಯಾಗಿದೆ.

ಇನ್ನೂ 4 ಸಾವಿರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದು, ಅವರಲ್ಲಿ 580ಕ್ಕೂ ಹೆಚ್ಚು ವಿದೇಶಿಗರು ಸೇರಿದ್ದಾರೆ ಎಂದು ವರದಿಯಾಗಿದೆ.

ಪ್ರವಾಹ ಹಾಗೂ ಭೂಕುಸಿತದಿಂದ ಸಂಪರ್ಕ ಕಡಿತಗೊಂಡಿದ್ದ ದುರ್ಗಮ ಪ್ರದೇಶಗಳಿಗೆ ರಕ್ಷಣಾ ಪಡೆಗಳು ಮತ್ತು ಹೆಲಿಕಾಪ್ಟರ್‌ಗಳ ಮೂಲಕ ತಲುಪಲಾಗುತ್ತಿದೆ. ಸಂತ್ರಸ್ತರ ರಕ್ಷಣೆ ಹಾಗೂ ಪರಿಹಾರ ಸಾಮಗ್ರಿಗಳನ್ನು ತಲುಪಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ.

ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮಾಹಿತಿ ಪ್ರಕಾರ, ಪ್ರವಾಹ ಪೀಡಿತ ಪ್ರದೇಶಗಳಿಂದ ಒಟ್ಟು 163 ಭಾರತೀಯರನ್ನು ರಕ್ಷಿಸಲಾಗಿದೆ. ಚೀನಾದಲ್ಲಿದ್ದ 151 ಭಾರತೀಯರನ್ನು ಕೂಡ ರಕ್ಷಿಸಲಾಗಿದ್ದು, ಅವರನ್ನು ಸುರಕ್ಷಿತವಾಗಿ ಕರೆತರಲು ಕ್ರಮ ಕೈಗೊಳ್ಳಲಾಗುತ್ತಿದೆ.

ರಕ್ಷಣಾ ಕಾರ್ಯಾಚರಣೆ ಹಾಗೂ ತಾಂತ್ರಿಕ ನೆರವಿಗಾಗಿ ಭಾರತವು ತಜ್ಞರ ತಂಡಗಳನ್ನು ನೇಪಾಳಕ್ಕೆ ಕಳುಹಿಸಿದೆ. ಪ್ರವಾಹದಲ್ಲಿ ಮೃತಪಟ್ಟವರ ಗುರುತು ಪತ್ತೆಗಾಗಿ ಡಿಎನ್‌ಎ ಮಾದರಿಗಳನ್ನು ಸಂಗ್ರಹಿಸುವುದು ಸೇರಿದಂತೆ ವಿವಿಧ ರೀತಿಯ ತಾಂತ್ರಿಕ ಸಹಕಾರವನ್ನು ಭಾರತೀಯ ತಂಡಗಳು ನೀಡುತ್ತಿವೆ.

ಭೂಕುಸಿತದಿಂದ ಹಲವು ಹೆದ್ದಾರಿಗಳು ಹಾಗೂ ಸೇತುವೆಗಳು ಕೊಚ್ಚಿಹೋಗಿರುವ ಹಿನ್ನೆಲೆಯಲ್ಲಿ ಅನೇಕ ಪ್ರದೇಶಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ನೇಪಾಳಿ ಸೇನೆ, ಸಶಸ್ತ್ರ ಪೊಲೀಸ್ ಪಡೆ ಹಾಗೂ ಭಾರತ ಸೇರಿದಂತೆ ವಿವಿಧ ದೇಶಗಳ ರಕ್ಷಣಾ ತಂಡಗಳು ಹೆಲಿಕಾಪ್ಟರ್‌ಗಳ ಮೂಲಕ ದುರ್ಗಮ ಪ್ರದೇಶಗಳಿಗೆ ತೆರಳಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ.

Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img