ಮಡಿಕೇರಿ:- ಸಿಎಂ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಬೇಸರ ವ್ಯಕ್ತಪಡಿಸಿದ್ದಾರೆ.
Advertisement
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಇಬ್ಬರ ನಡುವಿನ ಕುರ್ಚಿ ಕಿತ್ತಾಟದಿಂದ ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗುತ್ತಿದೆ. ಕಾಂಗ್ರೆಸ್ನ ಆಂತರಿಕ ವಿಚಾರದ ಬಗ್ಗೆ ನಮಗೆ ಯಾವುದೇ ಕಾಳಜಿ ಇಲ್ಲ ಅಂತ ಕಾಂಗ್ರೆಸ್ ನಾಯಕರೇ ಹೇಳಿದ್ದಾರೆಂದು ತಿಳಿಸಿದ್ದಾರೆ.
ರಾಜ್ಯದ ಜನ ಅವರನ್ನ ಆಡಳಿತ ಪಕ್ಷವಾಗಿ ಆಯ್ಕೆ ಮಾಡಿದ್ದಾರೆ. ಜನರ ಪರವಾಗಿ ಆಡಳಿತ ನಡೆಸುವುದು ಅವರ ಆದ್ಯ ಕರ್ತವ್ಯವಾಗಿದೆ. ಅವರ ಪಕ್ಷದಲ್ಲಿ ಆಂತರಿಕವಾಗಿ ಏನು ನಡೆಯುತ್ತಿದೆಯೋ ಅದು ನಡೆಯಲಿ, ಆದ್ರೆ ರಾಜ್ಯದ ಆಡಳಿತ ಜನರ ಹಿತಕ್ಕಾಗಿ ಕೆಲಸ ಮಾಡುವುದು ಮೊದಲ ಕರ್ತವ್ಯ ಅದನ್ನ ಮಾಡಲಿ ಎಂದು ಹೇಳಿದ್ದಾರೆ.


