HomeUncategorizedಪರಿಸರ ಮಾಲಿನ್ಯದಿಂದ ಅಭಿವೃದ್ಧಿ ಕುಂಠಿತ

ಪರಿಸರ ಮಾಲಿನ್ಯದಿಂದ ಅಭಿವೃದ್ಧಿ ಕುಂಠಿತ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಗದಗ: ಸಹಕಾರ ಇಲಾಖೆ ಗದಗ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಗದಗ ಜಿಲ್ಲಾ ಸಹಕಾರ ಯೂನಿಯನ್ ಗದಗ, ಅರಣ್ಯ ಇಲಾಖೆ ಗದಗ, ಕೆ.ಸಿ.ಸಿ. ಬ್ಯಾಂಕ್ ಧಾರವಾಡ, ಕೆ.ಎಂ.ಎಫ್ ಧಾರವಾಡ ಹಾಗೂ ಗದಗ ಜಿಲ್ಲೆಯ ಎಲ್ಲಾ ಸಹಕಾರ ಸಂಘ/ಬ್ಯಾಂಕುಗಳ ಸಂಯುಕ್ತ ಆಶ್ರಯದಲ್ಲಿ `ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ–2025’ರ ಅಂಗವಾಗಿ ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ತಾಯಿಯ ಹೆಸರಿನಲ್ಲಿ ಒಂದು ಸಸಿ ನೆಡುವ ಕಾರ್ಯಕ್ರಮ ಗದುಗಿನ ಸಿ.ಎಸ್. ಪಾಟೀಲ ಪ್ರೌಢಶಾಲೆಯ ಸಭಾಭವನದಲ್ಲಿ ಜರುಗಿತು.

ಸಹಕಾರ ಸಂಘಗಳ ಉಪನಿಬಂಧಕಿ ಎಸ್.ಎಸ್. ಕಬಾಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪರಿಸರ ಮಾಲಿನ್ಯದಿಂದ ಅನಾರೋಗ್ಯ ಸಮಸ್ಯೆಗಳು ಕಾಡುತ್ತಿವೆ. ಇವುಗಳಿಂದ ದೇಶದ ಪ್ರಗತಿ ಕುಂಠಿತವಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಸಿಗಳನ್ನು ನೆಟ್ಟು ನಾವು ಹಾಗೂ ಮುಂಬರುವ ಪೀಳಿಗೆಗಳಿಗೆ ಉತ್ತಮ ವಾತಾವರಣ ಒದಗಿಸುವದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ ಎಂದು ಹೇಳಿದರು.

ಗದಗ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಎಸ್.ಕೆ. ಕುರಡಗಿ ಮಾತನಾಡಿ, ದೇಶ, ರಾಜ್ಯ, ಜಿಲ್ಲೆ, ತಾಲೂಕು ಹಾಗೂ ನಮ್ಮ ಹಳ್ಳಿಗಳಿಂದ ಸಸಿ ನೆಡುವ ಕಾರ್ಯಕ್ರಮ ಪ್ರಾರಂಭವಾಗಬೇಕು. ಆರೋಗ್ಯವೇ ಭಾಗ್ಯವೆಂಬಂತೆ ಉತ್ತಮ ಆರೋಗ್ಯಕ್ಕೆ ಉಸಿರಾಡುವ ಗಾಳಿ, ಸೇವಿಸುವ ಆಹಾರ, ನೈರ್ಮಲ್ಯ ಮುಕ್ತ ನೀರು ತುಂಬಾ ಪ್ರಮುಖವಾಗಿದೆ ಎಂದರು.

ಗದಗ ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆ ಉಪನಿರ್ದೇಶಕ ಅರವಿಂದ ಎನ್.ನಾಗಜ್ಜನವರ ಮಾತನಾಡುತ್ತ, ಪ್ರಕೃತಿ ಮನುಷ್ಯನ ಆಸೆ ಈಡೇರಿಸಬಲ್ಲದು. ಆದರೆ ದುರಾಸೆಯನ್ನು ಈಡೇರಿಸಲಾರದು ಎಂಬುದನ್ನು ಅರಿತುಕೊಂಡು ಮುನ್ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಗದಗ ಜಿಲ್ಲಾ ಸಹಕಾರ ಯೂನಿಯನ್ ಉಪಾಧ್ಯಕ್ಷ ವಾಯ್.ಎಫ್. ಪಾಟೀಲ, ಮರ್ಚಂಟ್ಸ್ ಲಿಬರಲ್ ಕೋ-ಆಪ್ ಬ್ಯಾಂಕ್ ಅಧ್ಯಕ್ಷ ಮೋಹನ ಟಿ.ಕೋಟಿ, ಸಹಕಾರ ಸಂಘಗಳ ಸಹಾಯಕ ನಿಬಂಧಕಿ ಪುಷ್ಪಾ ಕೆ.ಕಡಿವಾಳ, ಜಿಲ್ಲಾ ನಿಯಂತ್ರಣಾಧಿಕಾರಿ ಎಸ್.ವ್ಹಿ. ಚಳಗೇರಿ ಸಿ.ಎಸ್. ಪಾಟೀಲ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಡಾ. ಎಂ.ಆರ್. ನಾಯಕ, ಡಾ. ಎಸ್.ಜಿ. ಕೊಲಮಿ, ಡಾ. ಆರ್.ಎನ್. ಹಂಸನೂರ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಕೆ.ಎಚ್. ಪಾಟಿಲ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥಾರಾದ ಡಾ. ಸುಧಾ ವಿ.ಮಂಕಣಿ ವಿಶೇಷ ಉಪನ್ಯಾಸ ನೀಡಿದರು. ವಿದ್ಯಾರ್ಥಿನಿಯರಾದ ನಿರ್ಮಲಾ ಲಮಾಣಿ, ಖುಷಿ ಲಮಾಣಿ ಪ್ರಾರ್ಥಿಸಿದರು. ಚಂದ್ರಶೇಖರ ಎಸ್.ಕರಿಯಪ್ಪನವರ ಸ್ವಾಗತಿಸಿ ನಿರೂಪಿಸಿದರು. ಮಹಿಳಾ ಸಹಕಾರ ಶಿಕ್ಷಕಿ ರಶೀದಾಬಾನು ಸಿ.ಯಲಿಗಾರ ವಂದಿಸಿದರು.

ಅಧ್ಯಕ್ಷತೆ ವಹಿಸಿದ್ದ ಗದಗ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಸಿ.ಎಂ. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿರುವ ಎಲ್ಲಾ ಸಹಕಾರ ಸಂಘಗಳು ತಮ್ಮ ಸಂಸ್ಥೆಗಳು ಹಾಗೂ ಸರ್ಕಾರಿ ರಸ್ತೆ, ಆಟದ ಮೈದಾನ, ಉದ್ಯಾನವನಗಳಂತಹ ಸ್ಥಳಗಳಲ್ಲಿ ಹೆಚ್ಚಿನ ಸಸಿಗಳನ್ನು ನೆಡುವುದರ ಮೂಲಕ ನಮಗೆ ಬೇಕಾದ ಆರೋಗ್ಯವನ್ನು ಪಡೆಯುವದರೊಂದಿಗೆ ಪರಿಸರ ಸಂರಕ್ಷಣೆಯ ಅರಿವು ಮೂಡಿಸೋಣ ಎಂದು ಹೇಳಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!