ವಿಜಯಸಾಕ್ಷಿ ಸುದ್ದಿ, ಗದಗ: ಸಮಾಜ ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಧಾರ್ಮಿಕವಾಗಿ ಉನ್ನತ ಸ್ಥಾನಕ್ಕೇರಬೇಕಾದರೆ ಶಿಕ್ಷಣ ಮತ್ತು ಸಂಘಟನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ಅಂಬಿಗ ಗಂಗಾಮತ ಸಮುದಾಯದ ಯುವ ನಾಯಕ ಹಾಗೂ ನಿಜಶರಣ ಅಂಬಿಗರ ಚೌಡಯ್ಯನವರ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಂಗಮೇಶ ಹಾದಿಮನಿ ಹೇಳಿದರು.
ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಆದ್ರಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಅಂಬಿಗ ಗಂಗಾಮತ ಸಮುದಾಯದ ಜಾಗೃತಿ ಸಭೆಯಲ್ಲಿ ಮಾತನಾಡಿದ ಅವರು, ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಹಾಗೂ ಆರ್ಥಿಕ ಪ್ರಗತಿಗೆ ಹೊಸ ಯೋಜನೆಗಳನ್ನು ರೂಪಿಸುವಲ್ಲಿ ಸಮಾಜದ ಮುಖಂಡರು ಮುಂದಾಗಬೇಕು ಎಂದು ಕರೆ ನೀಡಿದರು.
ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಉತ್ತಮ ಶಿಕ್ಷಣ ನೀಡುವುದು ಮುಖ್ಯ. ಉತ್ತಮ ಶಿಕ್ಷಣ ಮತ್ತು ಸಂಸ್ಕಾರದಿಂದಲೇ ಸಮಾಜದ ಭವಿಷ್ಯ ಉಜ್ವಲವಾಗುತ್ತದೆ. ಸಮಾಜದ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರಿ ಸಂಘಟನೆಗಳು ಬಲ ತುಂಬಲಿದ್ದು, ಸಮುದಾಯ ಆರ್ಥಿಕವಾಗಿ ಸದೃಢಗೊಳ್ಳಲು ಸಂಘಟನೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.
ಸಮುದಾಯದ ಜನರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದಾಗ ಮಾತ್ರ ಸಾಮಾಜಿಕ ಮತ್ತು ಆರ್ಥಿಕ ಸಬಲೀಕರಣ ಸಾಧ್ಯವಾಗುತ್ತದೆ. ಯುವಜನತೆ ಶಿಕ್ಷಣದ ಜೊತೆಗೆ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಸಭೆಯಲ್ಲಿ ಸಮುದಾಯದ ಅಧ್ಯಕ್ಷ ಶಂಕರಗೌಡ ರಾ. ಪಾಟೀಲ, ಮಹಾಂತಗೌಡ ಪಾಟೀಲ, ಗುಡದಯ್ಯ ಅಂಬಿಗೇರ, ಈರನಗೌಡ ರಾಹುತ, ಶಂಭುಗೌಡ ಪಾಟೀಲ, ಸುದೀಪ ಕಮತರ, ಮಹಾಂತೇಶ ಪಾಟೀಲ, ಸುಭಾಷಗೌಡ ಪಾಟೀಲ, ಶೋಭಕ್ಕ ಪಾಟೀಲ, ದೀಪಾ ಮಾಗಳ, ನೀಲವ್ವ ಪಾಟೀಲ, ಜಯಮ್ಮ ಪಾಟೀಲ, ನಿರ್ಮಲವ್ವ ಪಾಟೀಲ, ಸತ್ಯೆವ್ವ ತಳವಾರ, ಮಂಜಪ್ಪ ಸುಣಗಾರ, ಲಲಿತಾ ರಾಹುತ, ಯಮನೂರಗೌಡ ಪಾಟೀಲ, ಮಹಾದೇವಕ್ಕ ಪಾಟೀಲ, ಭೀಮವ್ವ ಪಾಟೀಲ ಸೇರಿದಂತೆ ಸಮಾಜದ ಮುಖಂಡರು ಹಾಗೂ ಬಾಂಧವರು ಉಪಸ್ಥಿತರಿದ್ದರು.
“ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಉತ್ತಮ ಶಿಕ್ಷಣ ನೀಡುವುದು ದೊಡ್ಡ ಸಂಪತ್ತು. ಶಿಕ್ಷಣ ಮತ್ತು ಸಂಘಟನೆಯಿಂದಲೇ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ.”
— ಸಂಗಮೇಶ ಹಾದಿಮನಿ



