ಧಾರವಾಡ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್ನ A9 ಆರೋಪಿ ಧನರಾಜ್ನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್ ಮತ್ತು ಸಹಚರರಿಗೆ ವಿಶೇಷ ಆತಿಥ್ಯ ನೀಡಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.
Advertisement
ಈ ಹಿನ್ನೆಲೆ ಆರೋಪಿಗಳನ್ನ ಬೇರೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶಿಸಿದೆ. ಇನ್ನೂ ಈ ಸಂಬಂಧ ಜೈಲಿನ ಹೊರ ಭಾಗದಲ್ಲಿಯೇ ವೈದ್ಯಕೀಯ ತಪಾಸಣೆ ನಡೆಸಿ A9 ಆರೋಪಿ ಧನರಾಜ್ ರನ್ನು ಶಿಫ್ಟ್ ಮಾಡಲಾಗಿದೆ.