ಧಾರವಾಡ ಕೇಂದ್ರ ಕಾರಾಗೃಹಕ್ಕೆ ಡಿ ಗ್ಯಾಂಗ್ʼನ 9ನೇ ಆರೋಪಿ ಧನರಾಜ್‌‌ ಶಿಫ್ಟ್!

0
Spread the love

ಧಾರವಾಡ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್ ಆ್ಯಂಡ್ ಗ್ಯಾಂಗ್​ನ A9 ಆರೋಪಿ ಧನರಾಜ್​ನನ್ನು ಧಾರವಾಡ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ದರ್ಶನ್​ ಮತ್ತು ಸಹಚರರಿಗೆ ವಿಶೇಷ ಆತಿಥ್ಯ ನೀಡಿರುವ ಫೋಟೋ ಮತ್ತು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದವು.

Advertisement

ಈ ಹಿನ್ನೆಲೆ ಆರೋಪಿಗಳನ್ನ ಬೇರೆ ಜೈಲುಗಳಿಗೆ ಸ್ಥಳಾಂತರಿಸುವಂತೆ ಬೆಂಗಳೂರಿನ ನ್ಯಾಯಾಲಯ ಆದೇಶಿಸಿದೆ. ಇನ್ನೂ ಈ ಸಂಬಂಧ ಜೈಲಿನ ಹೊರ ಭಾಗದಲ್ಲಿಯೇ ವೈದ್ಯಕೀಯ ತಪಾಸಣೆ ನಡೆಸಿ A9 ಆರೋಪಿ ಧನರಾಜ್ ರನ್ನು ಶಿಫ್ಟ್ ಮಾಡಲಾಗಿದೆ.

 

 


Spread the love

LEAVE A REPLY

Please enter your comment!
Please enter your name here