ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಕೆಂಪಲಿಂಗನಹಳ್ಳಿ ಗ್ರಾಮದಲ್ಲಿ ತಂಗಿಗೆ ಅಶ್ಲೀಲ ಮೆಸೇಜ್ ಕಳುಹಿಸ್ತಿದ್ದ ಯುವಕನಿಗೆ ಅಣ್ಣ ಧರ್ಮದೇಟು ಕೊಟ್ಟಿರುವ ಘಟನೆ ಜರುಗಿದೆ.
Advertisement
ಯುವತಿ ಅಣ್ಣ ರಮೇಶ್ನಿಂದ ಸತೀಶ್ ಎಂಬ ಯುವಕನಿಗೆ ಹಲ್ಲೆ ನಡೆದಿದೆ ಎಂದು ತಿಳಿದು ಬಂದಿದೆ. ಘಟನೆ ಸಂಬಂಧ ನೆಲಮಂಗಲ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸತೀಶ್ ಎಂಬಾತ ಯುವತಿಗೆ ಅಶ್ಲೀಲ ಮೆಸೇಜ್ ಕಳಿಸುತ್ತಿದ್ದ. ಯುವತಿ ಮೊಬೈಲ್ನಿಂದ ಲೊಕೇಷನ್ ಹಾಕಿದ್ದ ಅಣ್ಣ ರಮೇಶ್, ಕೆಂಪಲಿಂಗನಹಳ್ಳಿ ಬಂದಾಗ ಏಕಾಏಕಿ ಮುಖಕ್ಕೆ ಗುದ್ದಿ ತೀವ್ರ ಹಲ್ಲೆ ಮಾಡಿದ್ದಾರೆ. ಹಲ್ಲೆಗೊಳಗಾದ ಸತೀಶ್ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಹಲ್ಲೆಗೈದು ಪರಾರಿಯಾದ ರಮೇಶ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.