ಚಿಕ್ಕಮಗಳೂರು:- ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ MD ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
Advertisement
ಮಂಜು ಜೈನ್ ಎನ್ನುವರು ನೀಡಿದ ದೂರಿನ ಮೇರೆಗೆ ಯೂಟ್ಯೂಬರ್ ಸಮೀರ್ ವಿರುದ್ಧ ಚಿಕ್ಕಮಗಳೂರಿನ ಕಡೂರು ತಾಲೂಕಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡಿ ನಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ. ಹೀಗಾಗಿ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿದೆ.
ಧರ್ಮಸ್ಥಳಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿದ್ದ ಯೂಟ್ಯೂಬರ್ ಸಮೀರ್ ಎಂ.ಡಿ ಅವರಿಗೆ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಿದೆ. ಇದರಿಂದ ಸದ್ಯಕ್ಕೆ ಯೂಟ್ಯೂಬರ್ ಸಮೀರ್ ಎಂ.ಡಿ ಬಂಧನವಿಲ್ಲ ಎನ್ನಲಾಗಿದೆ.