ಧರ್ಮಸ್ಥಳ ಪ್ರಕರಣ: SIT ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್

0
Spread the love

ಬೆಂಗಳೂರು: ಧರ್ಮಸ್ಥಳ ತಲೆಬುರುಡೆ ಪ್ರಕರಣ ಸಂಬಂಧ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ ಅಕ್ಟೋಬರ್ 30ರಂದು ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ರದ್ದು ಮಾಡಿ, ತನಿಖೆ ಮುಂದುವರೆಯಲು ಅನುಮತಿ ನೀಡಿದೆ.

Advertisement

ಈ ತೀರ್ಪಿನ ಹಿನ್ನೆಲೆಯಲ್ಲಿ, ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠ್ಠಲಗೌಡ ಎಸ್‌ಐಟಿ ತನಿಖೆ ಮುಂದೆ ಎದುರಿಸಬೇಕಾಗಿದೆ.

ಪ್ರಕರಣದಲ್ಲಿ ಎಸ್‌ಐಟಿ ಪರ ವಿಶೇಷ ಅಭಿಯೋಜಕ ಬಿ.ಎನ್. ಜಗದೀಶ್ ವಾದಿಸಿ, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದರು. ಅರ್ಜಿದಾರರು ತನಿಖೆಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ನ್ಯಾಯಾಲಯ ತಡೆಯಾಜ್ಞೆಯನ್ನು ತೆರವುಗೊಳಿಸಿ, ಆರೋಪಿಗಳಿಗೆ ಯಾವುದೇ ಕಿರುಕುಳ ನೀಡದಂತೆ ಮಧ್ಯಂತರ ಆದೇಶವನ್ನು ವಿಸ್ತರಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಎಫ್ಐಆರ್‌ನಲ್ಲಿ ತಮ್ಮನ್ನು ಆರೋಪಿಗಳಾಗಿ ಉಲ್ಲೇಖಿಸಿಲ್ಲವೆಂದು ಹೈಕೋರ್ಟ್ಗೆ ತಿಳಿಸಿದ್ದರು. ಅವರು ನೋಟಿಸ್ ಅನ್ನು ಕಾನೂನಿನ ಪ್ರಕಾರ ನೀಡದಂತೆ ವಾಟ್ಸ್ಯಾಪ್ ಮತ್ತು ಇಮೇಲ್ ಮೂಲಕ ನೀಡಲಾಗಿದೆ ಎಂದು ಆರೋಪಿಸಿದ್ದರು.

ಆದರೆ ಎಸ್‌ಐಟಿ ಆರೋಪಿಗಳ ಮೇಲೆ 35(3) ಅಡಿಯಲ್ಲಿ ನೋಟಿಸ್ ನೀಡಿರುವುದು ಕಾನೂನು ಬಾಹಿರವೆಂದು ವಾದವಿತ್ತು. ಹೈಕೋರ್ಟ್ ಪೀಠ ನ್ಯಾ. ಮೊಹಮ್ಮದ್ ನವಾಜ್ ಅವರದ್ದಾಗಿದೆ, ಅವರು ಪ್ರಕರಣದ ತನಿಖೆಗೆ ನವೆಂಬರ್ 12ರವರೆಗೆ ತಡೆಯಾಜ್ಞೆ ನೀಡಿದ್ದರು.


Spread the love

LEAVE A REPLY

Please enter your comment!
Please enter your name here