ದಕ್ಷಿಣ ಕನ್ನಡ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆ ಚುರುಕುಗೊಂಡಿದ್ದು, ಇದರ ನಡುವೆ ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು ಬೆಳ್ತಂಗಡಿ ಕೋರ್ಟ್ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
Advertisement
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡುವ ನಿರೀಕ್ಷೆಯಿದ್ದು, ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ ಸೇರ್ಪಡೆ ಮಾಡುವ ಪ್ರಕ್ರಿಯೆ ನಡೆಯಲಿದೆ.
ಪ್ರಸ್ತುತ ಶಿವಮೊಗ್ಗ ಜೈಲಿನಲ್ಲಿರುವ ಚಿನ್ನಯ್ಯನನ್ನು ಸೆಪ್ಟೆಂಬರ್ 6ರಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಶಿವಮೊಗ್ಗ ಜೈಲಿನಿಂದ ಚಿನ್ನಯ್ಯನನ್ನು ಎಸ್ಐಟಿ ಅಧಿಕಾರಿಗಳು ಬೆಳಗ್ಗೆ 11:30ಕ್ಕೆ ಬೆಳ್ತಂಗಡಿ ಕೋರ್ಟ್ಗೆ ಹಾಜರುಪಡಿಸುವ ಸಾಧ್ಯತೆ ಇದೆ.