ಧಾರವಾಡ| ನೀರಿನ ಟ್ಯಾಂಕರ್ ಪಲ್ಟಿ ಹೊಡೆದು ಸ್ಕೂಟಿ ಸವಾರ ಸಾವು!

0
Spread the love

ಧಾರವಾಡ: ಧಾರವಾಡದ ತೇಜಸ್ವಿನಗರ ಬ್ರಿಡ್ಜ್ ಮೇಲೆ ನೀರಿನ ಟ್ಯಾಂಕರ್ ಪಲ್ಟಿ ಹೊಡೆದು ಸ್ಕೂಟಿ ಸವಾರ ಸಾವನ್ನಪ್ಪಿರುವ ಘಟನೆ ಜರುಗಿದೆ.

Advertisement

ನೀರಿನ ಟ್ಯಾಂಕರ್ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ ಮೊದಲು ಟಿಪ್ಪರ್‌ಗೆ ಡಿಕ್ಕಿ ಹೊಡೆದು ಆನಂತರ ಸ್ಕೂಟಿ ಮೇಲೆ ಪಲ್ಟಿಯಾದ ಪರಿಣಾಮ ಈ ಅವಘಡ ಸಂಭವಿಸಿದೆ. ಹನುಮಂತ (50) ಮೃತ ಸವಾರ.  ಈತ ಹುಬ್ಬಳ್ಳಿ ಆನಂದನಗರದ ನಿವಾಸಿ ಎನ್ನಲಾಗಿದೆ.

ನೀರಿನ ಟ್ಯಾಂಕರ್ ತೆಗೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ನ ಬ್ರೇಕ್ ಫೇಲ್ ಆಗಿತ್ತು. ಅದು ಎದುರಿಗೆ ಬರುತ್ತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದಿದೆ. ಇದೇ ವೇಳೆ ಪಕ್ಕದಲ್ಲೇ ಸ್ಕೂಟಿ ತೆಗೆದುಕೊಂಡು ಬರುತ್ತಿದ್ದ ಚಾಲಕನ ಮೇಲೆ ನೀರಿನ ಟ್ಯಾಂಕರ್ ಪಲ್ಟಿಯಾಗಿದೆ. ಪರಿಣಾಮ ಸ್ಕೂಟಿ ಚಾಲಕನ ತಲೆಗೆ ಬಲವಾದ ಪೆಟ್ಟಾಗಿತ್ತು. ಅಲ್ಲದೇ ಹೊಟ್ಟೆಯಲ್ಲಿನ ಕರಳು ಹೊರ ಬಂದಿದ್ದವು. ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತ ಬದುಕುಳಿಯಲಿಲ್ಲ.

ಘಟನಾ ಸ್ಥಳಕ್ಕೆ ಧಾರವಾಡ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ದೂರು ದಾಖಲಿಸಿಕೊಂಡಿದ್ದಾರೆ.


Spread the love

LEAVE A REPLY

Please enter your comment!
Please enter your name here