ಬೆಳಗಾವಿ: ಯಡಿಯೂರಪ್ಪ ಒಬ್ಬರೇ ಬಿಜೆಪಿ ಕಟ್ಟಿದ್ದಾರಾ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನೆ ಮಾಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಅವರು, ನಾವು 35-40 ವರ್ಷಗಳಿಂದ ಬಿಎಸ್ವೈ ಜೊತೆಗೇ ಜೀವನ ಮಾಡಿದ್ದಲ್ಲವೇ? ಯಡಿಯೂರಪ್ಪ ಒಬ್ಬರೇ ಬಿಜೆಪಿ ಕಟ್ಟಿದ್ದಾರಾ ಎಂದು ಪ್ರಶ್ನಿಸಿದ್ದಾರೆ.
Advertisement
ನಾವೇ ಪೆಟ್ರೋಲ್ ಹಾಕಿ ಬಸ್ ಟಿಕೆಟ್ ಕೊಡಿಸಿ ಕಳುಹಿಸಿ ಕೊಟ್ಟೆವು. ಈಗ ಅವರ ಶಿಷ್ಯಂದಿರು ನಮಗೆ, ‘ಸೈಕಲ್ ಹೊಡೆದಿದ್ದು’ ಎಂದು ಹೇಳುತ್ತಾರೆ. ಸ್ವತಃ ಯಡಿಯೂರಪ್ಪ ಮನೆಯಲ್ಲೇ ಭಿನ್ನಮತೀಯರ ಸಭೆ ಆಗುತ್ತದೆ. ಔತಣಕೂಟ ಮಾಡುವುದು, ಅಲ್ಲಿಂದ ಬೆನ್ನಿಗೆ ಚಾಕು ಹಾಕುವುದು ಅಲ್ಲ ಎಂದು ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ.