ಮೃತ ಪೇದೆ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಗದಗ ಜಿಲ್ಲೆಯ ಶಸಸ್ತ್ರ ಮೀಸಲು ಪಡೆಯಲ್ಲಿ ವಾಹನ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮುಖ್ಯ ಪೇದೆ ಬಸವರಾಜ ವಿಟ್ಲಾಪುರ ಇವರು ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ ಹಿನ್ನೆಲೆಯಲ್ಲಿ ಬ್ಯಾಂಕ್ ಆಫ್ ಬರೋಡಾ ಹುಲಕೋಟಿ ಶಾಖೆಯ ವತಿಯಿಂದ ಪೊಲೀಸ್ ಸ್ಯಾಲರಿ ಪ್ಯಾಕೇಜ್ ಅನ್ವಯ ಅವರ ಕುಟುಂಬದವರಿಗೆ 10 ಲಕ್ಷ ರೂ. ಚೆಕ್ ವಿತರಿಸಲಾಯಿತು.

Advertisement

ಈ ಸಂದರ್ಭದಲ್ಲಿ ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ, ಉಪ ಅಧೀಕ್ಷಕ ವಿ.ವಿ. ನಾಯಕ್, ಬ್ಯುಸಿನೆಸ್ ಡೆವಲಪಮೆಂಟ್ ಮ್ಯಾನೇಜರ್ ಚಿನ್ನರಾವ್ ಹುಲಕೋಟಿ, ಬ್ಯಾಂಕ್ ಆಫ್ ಬರೋಡ ಶಾಖೆಯ ಮ್ಯಾನೇಜರ್ ಟಿ. ಶಿವ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

LEAVE A REPLY

Please enter your comment!
Please enter your name here