ಪ್ರಾಯೋಗಿಕ ತರಕಾರಿ ಬೀಜಗಳ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಇಲ್ಲಿಯ ತಿಮ್ಮಾಪೂರ ಗ್ರಾಮದ ಶ್ರೀ ಕರಿಯಮ್ಮ ದೇವಿ ಸಮುದಾಯ ಭವನದಲ್ಲಿ ನಡೆದ ಜಿಲ್ಲಾ ತೋಟಗಾರಿಕಾ ಇಲಾಖೆಯ 2024-25ನೇ ಸಾಲಿನ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಾಯೋಗಿಕ ತರಕಾರಿ ಬೀಜಗಳ (ಹೈಬ್ರಿಡ್ ಹಾಗೂ ಸುಧಾರಿತ ತಳಿ) ಕಿರುಚೀಲ ವಿತರಣಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗದಗ ಜಿಲ್ಲಾ ಅಧ್ಯಕ್ಷ ಯಲ್ಲಪ್ಪ ಎಚ್.ಬಾಬರಿ ಉದ್ಘಾಟಿಸಿದರು.

Advertisement

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ತೋಟಗಾರಿಕೆ ಇಲಾಖೆ ಅಧಿಕಾರಿ ಶಂಭುಲಿಂಗಪ್ಪ ನೆಗಳ್ಳುರು ರೈತರಿಗೆ ತರಕಾರಿ ಬೀಜಗಳನ್ನು ವಿತರಿಸಿ ಮಾತನಾಡಿ, ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಾಯೋಗಿಕ ಹೊಸ ತಳಿ ಹೈಬ್ರಿಡ್ ತರಕಾರಿ ಬೀಜಗಳನ್ನು ರೈತರಿಗೆ ಉಚಿತವಾಗಿ ನೀಡಲಾಗುತ್ತಿದೆ. ರೈತರು ಈ ಬೀಜಗಳನ್ನು ಬಿತ್ತನೆ ಮಾಡಿ ಉತ್ತಮ ಇಳುವರಿಯನ್ನು ಪಡೆಯಬಹುದು ಎಂದು ಹೇಳಿದರು.

ಈ ತರಕಾರಿ ಬೀಜಗಳನ್ನು ಪ್ರತ್ಯೇಕವಾಗಿ ಅತಿ ಹೆಚ್ಚು ಈರುಳ್ಳಿ ಹಾಗೂ ಮೆಣಸಿನಕಾಯಿ ಬೆಳೆಯುವ ನಮ್ಮ ಜಿಲ್ಲೆಯಲ್ಲಿ ಪ್ರಯೋಗ ಮಾಡಲು ತಿಮ್ಮಾಪೂರ ಗ್ರಾಮವನ್ನು ಆಯ್ಕೆ ಮಾಡಲಾಗಿ 30 ಜನ ರೈತರಿಗೆ ತರಕಾರಿ ಬೀಜಗಳನ್ನು ವಿತರಣೆ ಮಾಡಲಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ಸಿಬ್ಬಂದಿ ಬಸವರಾಜ, ರೈತರಾದ ರಮೇಶ್ ಜೋಗಿನ, ಶೆರಣಪ್ಪ ಜೋಗಿನ, ರಾಮಪ್ಪ ಹಚ್ಚಪ್ಪನವರ, ಶ್ರೀಕಾಂತ ಪೂಜಾರ, ರಾಮಣ್ಣ ಖಂಡ್ರೆ, ಮುದುಕಪ್ಪ ದೇವರವರ, ಮಂಜುನಾಥ ಮಾಳಗುಡರ, ಶೇಖಪ್ಪ ಘಂಟಿ, ಹಾಲಪ್ಪ ಹಂಚಿನಾಳ, ಸಿದ್ದಪ್ಪ ಮಾಯಮನವರ, ಮಲ್ಲಪ್ಪ ಎಮ್ಮಿ, ಬಸಪ್ಪ ಬನ್ನಿಮರದ, ಅಜಿಪ್ಪ ಶಿಗರಗಡ್ಡಿ ಮುಂತಾದವರಿದ್ದರು.


Spread the love

LEAVE A REPLY

Please enter your comment!
Please enter your name here