ವಕ್ಫ್ ಸಂಸ್ಥೆಗಳಗೆ ಮಾಡ್ಯುಲರ್ ಫ್ರೀಜರ್ ವಿತರಣೆ

0
Spread the love

ವಿಜಯಸಾಕ್ಷಿ ಸುದ್ದಿ, ಗದಗ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ಬೆಂಗಳೂರು ವತಿಯಿಂದ ಗದಗ ಜಿಲ್ಲೆಯ ಆಯ್ದ ವಕ್ಫ್ ಸಂಸ್ಥೆಗಳಿಗೆ ಮೃತ ದೇಹವನ್ನು ಶೇಖರಿಸಲು ಮತ್ತು ಸುಗಮವಾಗಿ ಸಾಗಿಸಲು ಅನುಕೂಲವಾಗುವಂತೆ ಸುಸಜ್ಜಿತ ಮಾಡ್ಯುಲರ್ ಫ್ರೀಜರ್ ಬಾಕ್ಸ್ ವಿತರಣೆ ಕಾರ್ಯಕ್ರಮ ಜಾಕೀರ ಹುಸೇನ ಶಾದಿಮಹಲ್‌ನಲ್ಲಿ ಜರುಗಿತು.

Advertisement

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ರೋಣ ಶಾಸಕ ಜಿ.ಎಸ್. ಪಾಟೀಲ ಮಾಡ್ಯುಲರ್ ಫ್ರೀಜರ್ ಬಾಕ್ಸ್ ವಿತರಿಸಿ ಮಾತನಾಡಿ, ಕರ್ನಾಟಕ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಸರ್ವತೋಮುಖ ಅಭಿವೃದ್ಧಿಗಾಗಿ ನಮ್ಮ ಸರ್ಕಾರ ಬಹಳಷ್ಟು ಯೋಜನೆಗಳನ್ನು ಜಾರಿಗೆ ತಂದಿದೆ. ಅದರ ಸದುಪಯೋಗ ಪಡೆದುಕೊಳ್ಳಲು ಕರೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಜಿ.ಎಮ್. ದಂಡಿನ್ ವಹಿಸಿಕೊಂಡಿದ್ದರು. ಅತಿಥಿಗಳಾಗಿ ಮಾಜಿ ಶಾಸಕ ಡಿ.ಆರ್. ಪಾಟಿಲ್, ನಗರಾಭಿವೃದ್ಧಿ ಕೋಶದ ಅಧ್ಯಕ್ಷ ಅಕ್ಬರಸಾಬ ಬಬರ್ಚಿ, ಯುವ ನಾಯಕ ಕೃಷ್ಣಗೌಡ ಪಾಟೀಲ್ ಭಾಗವಹಿಸಿದ್ದರು.


Spread the love

LEAVE A REPLY

Please enter your comment!
Please enter your name here