ವಿಜಯಸಾಕ್ಷಿ ಸುದ್ದಿ, ಗದಗ: ಹಾವೇರಿ ಹಾಗೂ ಮಂಡ್ಯದಲ್ಲಿ ಅಖಿಲ ಭಾರತ ಸಾಹಿತ್ಯ ಸಮ್ಮೇಳನಗಳು ಅತ್ಯಂತ ಯಶಸ್ವಿಯಾಗಿ ಜರುಗಿ ಜನಮಾನಸದಲ್ಲಿ ಕನ್ನಡದ ಪ್ರಜ್ಞೆಯನ್ನು ಜಾಗೃತಗೊಳಿಸಿವೆ. ಆದರೆ, ಇದಕ್ಕೆ ವ್ಯತಿರಿಕ್ತವಾಗಿ ಮಂಡ್ಯ ಜಿಲ್ಲಾ ಮಾಜಿ ಕಸಾಪ ಅಧ್ಯಕ್ಷ ಜಯಪ್ರಕಾಶಗೌಡ ನೀಡಿರುವ ಹೇಳಿಕೆಯನ್ನು ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಖಂಡಿಸಿದೆ.
ಹಾವೇರಿ ಮತ್ತು ಮಂಡ್ಯ ಸಮ್ಮೇಳನಗಳು ಅಭೂತಪೂರ್ವ ಯಶಸ್ಸು ಗಳಿಸಿರುವದನ್ನು ನಾಡೇ ಸಂಭ್ರಮಿಸಿದೆ. ಸಮ್ಮೇಳನ ಕನ್ನಡಿಗರ ಹಬ್ಬವಾಗಿದ್ದು ಚರ್ಚೆ, ಸಂವಾದ, ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಕನ್ನಡಿಗರಲ್ಲಿ ಭಾಷಾಭಿಮಾನ ಸದಾ ಜಾಗೃತವಾಗಿಡುವ ಕಾರ್ಯವನ್ನು ಪರಿಷತ್ತು ಮಾಡುತ್ತಾ ಬಂದಿದೆ. ಆದರೆ ಜಯಪ್ರಕಾಶಗೌಡ ಅವರು ಯಶಸ್ಸನ್ನು ಅರಗಿಸಿಕೊಳ್ಳದೇ ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನವನ್ನು ಮಾಡುತ್ತಿದ್ದಾರೆ. ಪೂರ್ವಾಗ್ರಹ ಪೀಡಿತರಾಗಿ ಈ ರೀತಿಯ ಹೇಳಿಕೆ ನೀಡುವದು ಕನ್ನಡಿಗರಿಗೆ ಮಾಡುವ ಅವಮಾನವಾಗಿದೆ.
ಅವರು ತಮ್ಮ ಹೇಳಿಕೆಯನ್ನು ಹಿಂಪಡೆದುಕೊAಡು ಮಂಡ್ಯ ಹಾಗೂ ಹಾವೇರಿ ಜಿಲ್ಲೆಯ ಜನತೆಯ ಕ್ಷಮೆ ಕೇಳಬೇಕೆಂದು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ, ಕಾರ್ಯದರ್ಶಿ ಶಿವಾನಂದ ಗಿಡ್ನಂದಿ, ಕಿಶೋರಬಾಬು ನಾಗರಕಟ್ಟಿ, ಕೋಶಾಧ್ಯಕ್ಷ ಡಿ.ಎಸ್. ಬಾಪುರಿ, ಡಾ. ದತ್ತಪ್ರಸನ್ನ ಪಾಟೀಲ, ಶ್ರೀಕಾಂತ ಬಡ್ಡೂರ ಪ್ರಕಟನೆಯಲ್ಲಿ ಒತ್ತಾಯಿಸಿದ್ದಾರೆ.