ವಿಜಯಸಾಕ್ಷಿ ಸುದ್ದಿ, ಶಿರಹಟ್ಟಿ : ಬುಧವಾರ ಶಿರಹಟ್ಟಿ ಪಟ್ಟಣದಲ್ಲಿ ಆಯೋಜಿಸಲಾಗಿದ್ದ ತಾಲೂಕಾ ಮಟ್ಟದ ಜನಸ್ಪಂದನ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ್ದ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್ ಅವರು ಅನಿರೀಕ್ಷಿತವಾಗಿ ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಗೆ ಭೇಟಿ ನೀಡಿ, ಅಲ್ಲಿಯ ವಿದ್ಯಾರ್ಥಿಗಳ ಕೊಠಡಿಗಳಿಗೆ ತೆರಳಿ ಅವರ ಶೈಕ್ಷಣಿಕ ಗುಣಮಟ್ಟ ಪರಿಶೀಲನೆ ನಡೆಸಿದರು.
Advertisement
ಈ ಸಂದರ್ಭದಲ್ಲಿ ಡಿಸಿ ವೈಶಾಲಿ ಅವರು ವಿದ್ಯಾರ್ಥಿಗಳಿಗೆ ಕನ್ನಡ, ಇಂಗ್ಲೀಷ್ ವಿಷಯಗಳ ಕುರಿತು ಕೆಲ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿಗಳಿಂದ ಉತ್ತರಗಳನ್ನು ಪಡೆದುಕೊಂಡು ಅವುಗಳ ಕುರಿತು ಚರ್ಚೆ ನಡೆಸಿದರು.
ಈ ಸಂದರ್ಭದಲ್ಲಿ ಸಿಇಓ ಭರತ್.ಎಸ್, ತಾಲೂಕಾ ಸಮಾಜ ಕಲ್ಯಾಣಾಧಿಕಾರಿ ಶರಣಯ್ಯ ಹಿರೇಮಠ, ಬಿಸಿಎಂನ ಮರಿಗೌಡ ಸುರಕೋಡ, ಪ್ರಾಚಾರ್ಯ ನಾಗರಾಜ ಕಳಸಾಪೂರ ಉಪಸ್ಥಿತರಿದ್ದರು.