ವಿಜಯಸಾಕ್ಷಿ ಸುದ್ದಿ, ಗದ: ಗಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಡಿ.ಸಿ. ಪಾವಟೆ ಶಿಕ್ಷಣ ಮಹಾವಿದ್ಯಾಲಯ ಗದಗ ಸಹಯೋಗದಲ್ಲಿ ಮೇ. 13ರಂದು ಬೆಳಿಗ್ಗೆ 10.30 ಗಂಟೆಗೆ ಡಿ.ಸಿ. ಪಾವಟೆ ಶಿಕ್ಷಣ ಮಹಾವಿದ್ಯಾಲಯದಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಕುರಿತು ಜಿಲ್ಲಾ ಮಟ್ಟದ ಕವಿಗೋಷ್ಠಿಯನ್ನು ಆಯೋಜಿಸಲಾಗಿದೆ.
ಕವಿಗೋಷ್ಠಿಯನ್ನು ಜಿಲ್ಲಾ ಖಜಾನೆ ಅಧಿಕಾರಿ ವಿ. ಹರಿನಾಥಬಾಬು ಉದ್ಘಾಟಿಸುವರು. ಸಾಹಿತಿಗಳು ಹಾಗೂ ಪತ್ರಕರ್ತರಾದ ಐ.ಕೆ. ಕಮ್ಮಾರ ಆಶಯ ನುಡಿಗಳನ್ನಾಡುವರು. ಅಧ್ಯಕ್ಷತೆಯನ್ನು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. ಮುಖ್ಯ ಅತಿಥಿಗಳಾಗಿ ಜ. ತೋಂಟದಾರ್ಯ ವಿದ್ಯಾಪೀಠದ ಕಾರ್ಯದರ್ಶಿ ಎಸ್.ಎಸ್. ಪಟ್ಟಣಶೆಟ್ಟರ, ಸಾಹಿತಿ ಡಾ. ರಾಮಚಂದ್ರ ಹಂಸನೂರ, ಡಿ.ಸಿ. ಪಾವಟೆ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲ ಎಸ್.ಪಿ. ಗೌಳಿ ಪಾಲ್ಗೊಳ್ಳುವರು.
ಕವಿಗೋಷ್ಠಿಯಲ್ಲಿ ಶಿಲ್ಪಾ ಮ್ಯಾಗೇರಿ, ಮಂಜುಳಾ ವೆಂಕಟೇಶಯ್ಯ, ಹೇಮಾ ಮೊರಬ, ಸಂತೋಷ ಅಂಗಡಿ , ರಾಜೇಶ್ವರಿ ಬಡ್ನಿ, ಬಸವರಾಜ ನೆಲಜೇರಿ, ಡಾ. ಮಹೇಶ ಕೆರಿ, ವಿಜಯಲಕ್ಷಿö್ಮ ಉಪ್ಪಾರ, ಭುವನೇಶ್ವರಿ ಅಂಗಡಿ, ಮಹಾಂತೇಶ ಬೇರಗಣ್ಣವರ, ವಿನಾಯಕ ಕಮತದ, ಕೊಟ್ರೇಶ ಜವಳಿ, ಭಾಗ್ಯಶ್ರೀ ಹುರಕಡ್ಲಿ, ಬಸವರಾಜ ಕುರಿ, ಈಶ್ವರ ಕುರಿ, ಮುತ್ತು ವಡ್ಡರ, ಸಿದ್ದು ಸತ್ಯಣ್ಣವರ, ಭಾಗ್ಯಶ್ರೀ ಹಳ್ಳಿಕೇರಿಮಠ, ಎಸ್.ಬಿ. ಹೂಗಾರ, ಟಿ.ಬಿ. ಕರದಾನಿ, ಹುಚ್ಚೀರಪ್ಪ ಈಟಿ, ವಿಶ್ವನಾಥ ಆದಿ, ಮಂಜುನಾಥ ಮಟ್ಟಿ ಮೊದಲಾದವರು ಭಾಗವಹಿಸುವರು.
ಸಾಹಿತ್ಯಾಸಕ್ತರು ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಕಾರ್ಯದರ್ಶಿಗಳಾದ ಕಿಶೋರಬಾಬು ನಾಗರಕಟ್ಟಿ, ಡಾ. ದತ್ತಪ್ರಸನ್ನ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.