HomeKarnataka Newsಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಸಿಗುವ ವಿಚಾರ: ಶಾಸಕ ಇಕ್ಬಾಲ್ ಹುಸೇನ್ ಏನಂದ್ರೂ ಗೊತ್ತಾ?

ಡಿಕೆ ಶಿವಕುಮಾರ್ ಗೆ ಸಿಎಂ ಸ್ಥಾನ ಸಿಗುವ ವಿಚಾರ: ಶಾಸಕ ಇಕ್ಬಾಲ್ ಹುಸೇನ್ ಏನಂದ್ರೂ ಗೊತ್ತಾ?

For Dai;y Updates Join Our whatsapp Group

Spread the love

ರಾಮನಗರ: “ನಮ್ಮ ಆಸೆ, ಅಭಿಲಾಷೆಗಳನ್ನು ಭಗವಂತ ಈಡೇರಿಸುತ್ತಿದ್ದಾನೆ, ಪ್ರಾರ್ಥನೆ ನೆರವೇರುವ ಕಾಲ ಬಂದಿದೆ” ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಸಿಗುವ ಸಾಧ್ಯತೆ ಕುರಿತು ರಾಮನಗರದಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.

ಎಲ್ಲರಿಗೂ ತಮ್ಮದೇ ಆದ ಆಸೆ ಮತ್ತು ನಿರೀಕ್ಷೆಗಳಿರುತ್ತವೆ. ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರಲ್ಲೂ ಇದೇ ರೀತಿಯ ನಿರೀಕ್ಷೆ ಇತ್ತು. “ನಾನು ಮೌನ ಮುರಿದು ಮಾತನಾಡಿದ್ದೆ ಅಷ್ಟೇ. ಕೆಲವರು ಮೌನವಾಗಿ ಪ್ರಾರ್ಥನೆ ಮಾಡಿದ್ದರು. ಆ ಪ್ರಾರ್ಥನೆಗಳು ಈಗ ನೆರವೇರುವ ಹಂತಕ್ಕೆ ಬಂದಿದೆ” ಎಂದು ಹೇಳಿದರು.

ನಮ್ಮ ನಾಯಕರಿಗೆ ಒಂದು ಮಹತ್ವದ ಅವಕಾಶ ಸಿಗುವ ಕಾಲ ಹತ್ತಿರವಾಗಿದೆ ಎಂದು ಭಗವಂತನಿಗೆ ಕೃತಜ್ಞತೆ ಸಲ್ಲಿಸಿದ್ದೇನೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ, ಪರಮೇಶ್ವರ್ ಅವರಿಗೆ ಸಿಎಂ ಸ್ಥಾನಕ್ಕೆ ಬೇಡಿಕೆ ಇಟ್ಟ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಇಕ್ಬಾಲ್ ಹುಸೇನ್, “ಪರಮೇಶ್ವರ್ ಕೂಡ ನಮ್ಮ ನಾಯಕರು. ಅವರು ಹಿರಿಯರು. ಅವರು ಕೇಳುವುದರಲ್ಲಿ ತಪ್ಪೇನಿದೆ? ಅವರು ಕೆಪಿಸಿಸಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಅವಕಾಶ ಕೇಳುವುದು ಸಹಜ” ಎಂದು ಹೇಳಿದರು.

ಅದೇ ವೇಳೆ ತಮ್ಮ ಬೆಂಬಲವನ್ನು ಪುನರುಚ್ಚರಿಸಿದ ಅವರು, “ನಮ್ಮ ಜಿಲ್ಲೆಯವರು ಹಾಗೂ ನಾಯಕರಾದ ಡಿಕೆ ಶಿವಕುಮಾರ್ ಅವರಿಗೆ ಅವಕಾಶ ಸಿಗಬೇಕು ಎಂದು ನಾವು ಹೇಳಿದ್ದೇವೆ” ಎಂದು ಸ್ಪಷ್ಟಪಡಿಸಿದರು.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!